ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣ ಇಂದು ಆರಂಭವಾಗಲಿದೆ.
ಕಾಡಿನಿಂದ ನಾಡಿಗೆ ಇಂದು ದಸರಾ ಗಜಪಡೆ ಬರಲಿದೆ. ಗಜಪಯಣಕ್ಕೆ ಸಚಿವ ಎಸ್.ಟಿ ಸೋಮಶೇಖರ್ ಚಾಲನೆ ನೀಡಲಿದ್ದಾರೆ.
ವೀರನಹೊಸಹಳ್ಳಿ ಅರಣ್ಯ ಪ್ರದೇಶದ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಗಜಪಡೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಬಳಿಕ ಲಾರಿಗಳ ಮೂಲಕ ಅಭಿಮನ್ಯು ನೇತೃತ್ವದ ಆನೆಗಳ ತಂಡ ಮೈಸೂರಿಗೆ ಆನೆಗಳು ಆಗಮಿಸಲಿವೆ. ಈ ಭಾರಿ 14 ಆನೆಗಳು ಮೈಸೂರು ದಸರೆಯಲ್ಲಿ ಭಾಗವಹಿಸಲಿವೆ.
ಈ ಭಾರಿ ಅದ್ದೂರಿ ಮತ್ತು ಸಾಂಪ್ರದಾಯಿಕ ದಸರೆಗೆ ಸರ್ಕಾರ ಸಿದ್ದತೆ ನಡೆಸಿದೆ.