Sunday, December 14, 2025
Sunday, December 14, 2025

ಮಲೆನಾಡಿನಲ್ಲಿ ಮಳೆ: ತುಂಗಭದ್ರ ನದಿ ನೀರಿನ ಹರಿವು ಗಣನೀಯ ಏರಿಕೆ

Date:

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಚುರುಕಾಗಿರುವುದರಿಂದ ಇಲ್ಲಿನ ತುಂಗ, ಭದ್ರಾ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಏರಿಕೆಯಾಗುತ್ತಿದೆ.

ಶನಿವಾರಂದು ನದಿಯಲ್ಲಿ ನೀರಿನ ಮಟ್ಟ 9.200 ಮೀ.ಗೆ ಏರಿದೆ. ಶುಕ್ರವಾರ 7.240 ಮೀ., ಗುರುವಾರ 7.210 ಮೀ.
ಇತ್ತು. ಕೇವಲ 3 ದಿನಗಳ ಅಂತರದಲ್ಲಿ ನದಿಯಲ್ಲಿ 2 ಮೀ. ನೀರಿನ ಮಟ್ಟ ಹೆಚ್ಚಾಗಿದೆ. ಮಳೆ ಇನ್ನೂ ಮುಂದುವರಿದರೆ ಅಥವಾ ಜಲಾಶಯದಿಂದ ಹೆಚ್ಚುವರಿ ನೀರು ಹರಿಸಿದರೆ ನದಿಯಲ್ಲಿ ಮತ್ತೆ ಪ್ರವಾಹ ಉಂಟಾಗುವ ಸಾಧ್ಯತೆ ಇದೆ.

ಜುಲೈ ತಿಂಗಳಲ್ಲಿ ನಗರದ ಗಂಗಾನಗರದ ಮನೆಗಳು ಜಲಾವೃತವಾಗಿದ್ದವು. ಚಿಕ್ಕಬಿದರಿ ಸಾರಥಿ ಮತ್ತು ಉಕ್ಕಡಗಾತ್ರಿ ಯಿಂದ ನಂದಿಗುಡಿ ನಡುವಿನ ಸೇತುವೆ ಮುಳುಗಿ ರಸ್ತೆ ಸಂಪರ್ಕ ಕಡಿತವಾಗಿತ್ತು. ಮತ್ತೆ ಅದೇ ದುಃಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಪ್ರವಾಹಕ್ಕೀಡಾದ ಪ್ರದೇಶಗಳ ಜನರು ಆತಂಕದಲ್ಲಿದೆ.

ಹರಿಹರದಲ್ಲಿ ಶುಕ್ರವಾರ 10.2 ಮಿ.ಮೀ., ಮಲೇಬೆನ್ನೂರು 14 ಮಿ.ಮೀ., ಕೊಂಡಜ್ಜಿ 9.2 ಮಿ.ಮೀ., ಹೊಳೆಸಿರಿಗೆರೆಯಲ್ಲಿ 10.4 ಮಿ.ಮೀ., ಒಟ್ಟು 43.6, ಸರಾಸರಿ 10.90 ಮಿ.ಮೀ. ಮಳೆ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...