Thursday, July 9, 2026
Thursday, July 9, 2026

ಮಲೆನಾಡಿನಲ್ಲಿ ಮಳೆ: ತುಂಗಭದ್ರ ನದಿ ನೀರಿನ ಹರಿವು ಗಣನೀಯ ಏರಿಕೆ

Date:

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಚುರುಕಾಗಿರುವುದರಿಂದ ಇಲ್ಲಿನ ತುಂಗ, ಭದ್ರಾ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಏರಿಕೆಯಾಗುತ್ತಿದೆ.

ಶನಿವಾರಂದು ನದಿಯಲ್ಲಿ ನೀರಿನ ಮಟ್ಟ 9.200 ಮೀ.ಗೆ ಏರಿದೆ. ಶುಕ್ರವಾರ 7.240 ಮೀ., ಗುರುವಾರ 7.210 ಮೀ.
ಇತ್ತು. ಕೇವಲ 3 ದಿನಗಳ ಅಂತರದಲ್ಲಿ ನದಿಯಲ್ಲಿ 2 ಮೀ. ನೀರಿನ ಮಟ್ಟ ಹೆಚ್ಚಾಗಿದೆ. ಮಳೆ ಇನ್ನೂ ಮುಂದುವರಿದರೆ ಅಥವಾ ಜಲಾಶಯದಿಂದ ಹೆಚ್ಚುವರಿ ನೀರು ಹರಿಸಿದರೆ ನದಿಯಲ್ಲಿ ಮತ್ತೆ ಪ್ರವಾಹ ಉಂಟಾಗುವ ಸಾಧ್ಯತೆ ಇದೆ.

ಜುಲೈ ತಿಂಗಳಲ್ಲಿ ನಗರದ ಗಂಗಾನಗರದ ಮನೆಗಳು ಜಲಾವೃತವಾಗಿದ್ದವು. ಚಿಕ್ಕಬಿದರಿ ಸಾರಥಿ ಮತ್ತು ಉಕ್ಕಡಗಾತ್ರಿ ಯಿಂದ ನಂದಿಗುಡಿ ನಡುವಿನ ಸೇತುವೆ ಮುಳುಗಿ ರಸ್ತೆ ಸಂಪರ್ಕ ಕಡಿತವಾಗಿತ್ತು. ಮತ್ತೆ ಅದೇ ದುಃಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಪ್ರವಾಹಕ್ಕೀಡಾದ ಪ್ರದೇಶಗಳ ಜನರು ಆತಂಕದಲ್ಲಿದೆ.

ಹರಿಹರದಲ್ಲಿ ಶುಕ್ರವಾರ 10.2 ಮಿ.ಮೀ., ಮಲೇಬೆನ್ನೂರು 14 ಮಿ.ಮೀ., ಕೊಂಡಜ್ಜಿ 9.2 ಮಿ.ಮೀ., ಹೊಳೆಸಿರಿಗೆರೆಯಲ್ಲಿ 10.4 ಮಿ.ಮೀ., ಒಟ್ಟು 43.6, ಸರಾಸರಿ 10.90 ಮಿ.ಮೀ. ಮಳೆ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...