Saturday, May 16, 2026
Saturday, May 16, 2026

ಮಲೆನಾಡಿನಲ್ಲಿ ಮಳೆ: ತುಂಗಭದ್ರ ನದಿ ನೀರಿನ ಹರಿವು ಗಣನೀಯ ಏರಿಕೆ

Date:

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಚುರುಕಾಗಿರುವುದರಿಂದ ಇಲ್ಲಿನ ತುಂಗ, ಭದ್ರಾ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಏರಿಕೆಯಾಗುತ್ತಿದೆ.

ಶನಿವಾರಂದು ನದಿಯಲ್ಲಿ ನೀರಿನ ಮಟ್ಟ 9.200 ಮೀ.ಗೆ ಏರಿದೆ. ಶುಕ್ರವಾರ 7.240 ಮೀ., ಗುರುವಾರ 7.210 ಮೀ.
ಇತ್ತು. ಕೇವಲ 3 ದಿನಗಳ ಅಂತರದಲ್ಲಿ ನದಿಯಲ್ಲಿ 2 ಮೀ. ನೀರಿನ ಮಟ್ಟ ಹೆಚ್ಚಾಗಿದೆ. ಮಳೆ ಇನ್ನೂ ಮುಂದುವರಿದರೆ ಅಥವಾ ಜಲಾಶಯದಿಂದ ಹೆಚ್ಚುವರಿ ನೀರು ಹರಿಸಿದರೆ ನದಿಯಲ್ಲಿ ಮತ್ತೆ ಪ್ರವಾಹ ಉಂಟಾಗುವ ಸಾಧ್ಯತೆ ಇದೆ.

ಜುಲೈ ತಿಂಗಳಲ್ಲಿ ನಗರದ ಗಂಗಾನಗರದ ಮನೆಗಳು ಜಲಾವೃತವಾಗಿದ್ದವು. ಚಿಕ್ಕಬಿದರಿ ಸಾರಥಿ ಮತ್ತು ಉಕ್ಕಡಗಾತ್ರಿ ಯಿಂದ ನಂದಿಗುಡಿ ನಡುವಿನ ಸೇತುವೆ ಮುಳುಗಿ ರಸ್ತೆ ಸಂಪರ್ಕ ಕಡಿತವಾಗಿತ್ತು. ಮತ್ತೆ ಅದೇ ದುಃಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಪ್ರವಾಹಕ್ಕೀಡಾದ ಪ್ರದೇಶಗಳ ಜನರು ಆತಂಕದಲ್ಲಿದೆ.

ಹರಿಹರದಲ್ಲಿ ಶುಕ್ರವಾರ 10.2 ಮಿ.ಮೀ., ಮಲೇಬೆನ್ನೂರು 14 ಮಿ.ಮೀ., ಕೊಂಡಜ್ಜಿ 9.2 ಮಿ.ಮೀ., ಹೊಳೆಸಿರಿಗೆರೆಯಲ್ಲಿ 10.4 ಮಿ.ಮೀ., ಒಟ್ಟು 43.6, ಸರಾಸರಿ 10.90 ಮಿ.ಮೀ. ಮಳೆ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...