Monday, June 23, 2025
Monday, June 23, 2025

ಭೂಗರ್ಭಶಾಸ್ತ್ರಜ್ಞರಿಂದ ಸುಳ್ಯ ಸುತ್ತಮುತ್ತ ಪ್ರಾಕೃತಿಕ ಅನಾಹುತಗಳ ಅಧ್ಯಯನ

Date:

ಸುಳ್ಯ ತಾಲೂಕಿನಲ್ಲಿ ಅದರಲ್ಲೂ ಅರಣ್ಯ ಪ್ರದೇಶಗಳಲ್ಲಿ ಸಂಭವಿಸಿರುವ ಪ್ರಾಕೃತಿಕ ಅನಾಹುತಗಳಿಗೆ ಕಾರಣ ಪತ್ತೆಗೆ ಭೂಗರ್ಭಶಾಸ್ತ್ರಜ್ಞರಿಂದ ಅಧ್ಯಯನ ನಡೆಸುವ ನಿಟ್ಟಿನಲ್ಲಿ ಸೂಕ್ತ ಕ್ರಮಕ್ಕಾಗಿ ರಾಜ್ಯ ಸರಕಾರವನ್ನು ಕೋರಲಾಗುವುದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಯದ ಕಲ್ಮಕಾರು, ಸಂಪಾಜೆ ಮತ್ತಿತರ ಪ್ರದೇಶಗಳಲ್ಲಿ ನಡೆದ ಪ್ರಾಕೃತಿಕ ಅನಾಹುತದಲ್ಲಿ ಮನೆಗಳಿಗೆ ನೀರು ನುಗ್ಗಿದ ಪ್ರಕರಣ, ಭಾಗಶಃ ಮನೆ ಹಾನಿ ಹಾಗೂ ಪೂರ್ಣ ಮನೆ ಹಾನಿ ಪ್ರಕರಣಗಳಿಗೆ ನಿಗದಿತ ಪರಿಹಾರ ನೀಡಲಾಗುತ್ತಿದೆ. ಬಾಳಗೋಡು, ಹರಿಹರ ಮತ್ತು ಕಲ್ಮಕಾರುಗಳಲ್ಲಿ 6 ಸಾವಿರ ಸಂತ್ರಸ್ತರಿಗೆ ಕಾಳಜಿ ಕೇಂದ್ರಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಸುಮಾರು 100 ಮಂದಿ ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ. ಕಲ್ಮಕಾರಿನಲ್ಲಿ 150ಕ್ಕೂ ಅಧಿಕ ಕುಟುಂಬ ರಸ್ತೆ ಮಾರ್ಗದ ಸಂಪರ್ಕ ಕಡಿದುಕೊಂಡಿದೆ. ಅಲ್ಲಿಗೆ ತಾತ್ಕಾಲಿಕವಾಗಿ ಮರು ಸಂಪರ್ಕ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...