Friday, February 6, 2026
Friday, February 6, 2026

ತಜ್ಞರ ಪ್ರಕಾರ ಕೋವಿಡ್ ನಾಲ್ಕನೇ ಅಲೆ ಸಾಧ್ಯವಿಲ್ಲ

Date:

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ನಾಲ್ಕನೇ ಅಲೆ ಬರಬಹುದೆಂಬ ಭೀತಿ ಕಾಡುತ್ತಿದ್ದು, ಇದರ ಜೊತೆಗೆ ಮಂಕಿ ಪಾಕ್ಸ್ ಆತಂಕವೂ ಎದುರಾಗಿದೆ.

ಇದರ ಮಧ್ಯೆ ತಜ್ಞರು ಕೊರೊನಾ ನಾಲ್ಕನೇ ಅಲೆ ಆತಂಕದ ಕುರಿತು ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದರೂ ಸಹ ಹೊಸ ತಳಿ ಪತ್ತೆಯಾಗಿಲ್ಲ.

ಆದ್ದರಿಂದ ನಾಲ್ಕನೇ ಅಲೆ ಬರುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

ಈಗ ವರದಿಯಾಗುತ್ತಿರುವ ಪ್ರಕರಣಗಳು ಓಮಿಕ್ರಾನ್ ಹಾಗೂ ಅದರ ಉಪ ತಳಿಗಳ ಮೂಲಕ ಬಂದಿದೆ. ಇದು ಗಂಟಲು ಬೇನೆ ಹಾಗೂ ಸಾಮಾನ್ಯ ಶೀತ ಜ್ವರದ ರೀತಿಯಲ್ಲಿ ಇರುತ್ತದೆ. ಆಸ್ಪತ್ರೆ ದಾಖಲಾಗುವ ಸಂಭವವೂ ಕಡಿಮೆ ಎಂದಿದ್ದಾರೆ.

ವೃದ್ಧರು ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಮಾತ್ರ ಕೊರೋನಾ ಸೋಂಕಿನಿಂದ ಮೃತಪಟ್ಟಿದೆ. ಹೀಗಿದ್ದರೂ ಸಹ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಬಾರದು. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸೋಂಕು ತಗುಲದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...