Wednesday, August 26, 2026
Wednesday, August 26, 2026

ತಜ್ಞರ ಪ್ರಕಾರ ಕೋವಿಡ್ ನಾಲ್ಕನೇ ಅಲೆ ಸಾಧ್ಯವಿಲ್ಲ

Date:

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ನಾಲ್ಕನೇ ಅಲೆ ಬರಬಹುದೆಂಬ ಭೀತಿ ಕಾಡುತ್ತಿದ್ದು, ಇದರ ಜೊತೆಗೆ ಮಂಕಿ ಪಾಕ್ಸ್ ಆತಂಕವೂ ಎದುರಾಗಿದೆ.

ಇದರ ಮಧ್ಯೆ ತಜ್ಞರು ಕೊರೊನಾ ನಾಲ್ಕನೇ ಅಲೆ ಆತಂಕದ ಕುರಿತು ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದರೂ ಸಹ ಹೊಸ ತಳಿ ಪತ್ತೆಯಾಗಿಲ್ಲ.

ಆದ್ದರಿಂದ ನಾಲ್ಕನೇ ಅಲೆ ಬರುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

ಈಗ ವರದಿಯಾಗುತ್ತಿರುವ ಪ್ರಕರಣಗಳು ಓಮಿಕ್ರಾನ್ ಹಾಗೂ ಅದರ ಉಪ ತಳಿಗಳ ಮೂಲಕ ಬಂದಿದೆ. ಇದು ಗಂಟಲು ಬೇನೆ ಹಾಗೂ ಸಾಮಾನ್ಯ ಶೀತ ಜ್ವರದ ರೀತಿಯಲ್ಲಿ ಇರುತ್ತದೆ. ಆಸ್ಪತ್ರೆ ದಾಖಲಾಗುವ ಸಂಭವವೂ ಕಡಿಮೆ ಎಂದಿದ್ದಾರೆ.

ವೃದ್ಧರು ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಮಾತ್ರ ಕೊರೋನಾ ಸೋಂಕಿನಿಂದ ಮೃತಪಟ್ಟಿದೆ. ಹೀಗಿದ್ದರೂ ಸಹ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಬಾರದು. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸೋಂಕು ತಗುಲದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...