ರಾಜ್ಯದೆಲ್ಲೆಡೆ ಮಳೆ ಅಬ್ಬರ ಜೋರಾಗಿದೆ. ಹಳ್ಳ, ಕೆರೆ, ಜಲಪಾತಗಳೆಲ್ಲಾ ಧುಮ್ಮಿಕ್ಕಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ನದಿಗಳಿಗೆ ಬಾಗಿಣ ಸಹ ಅರ್ಪಿಸಲಾಗುತ್ತಿದೆ. ನೀರು, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ.
ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದೆ. ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಮತ್ತು ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.
ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮಾನ್ಸೂನ್ ಆರಂಭವಾಗಿದೆ. ಅನೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮದಿಂದಾಗಿ ಮತ್ತೆ ನೀರಿನ ಹರಿವು ಏರಿದ್ದು ರಾಜ್ಯದ ವಿವಿಧ ಜಲಾಶಯಗಳು ಮತ್ತೆ ತುಂಬಲು ಪ್ರಾರಂಭಿಸಿವೆ.