Saturday, December 6, 2025
Saturday, December 6, 2025

ಸುಗ್ರೀವಾಜ್ಞೆಗಳಿಗೆ ಪರಿಶೀಲಿಸದೇ ಸಹಿ ಹಾಕಲಾರೆ- ಆರೀಫ್ ಖಾನ್

Date:

ಕೇರಳ ಲೋಕಾಯುಕ್ತ ಸೇರಿದಂತೆ ಅನೇಕ ಸುಗ್ರೀವಾಜ್ಞೆಗಳ ಅವಧಿ ಸೋಮವಾರ ಮುಕ್ತಾಯಗೊಳ್ಳುತ್ತಿರುವಂತೆಯೇ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಅವರು ಸುಗ್ರೀವಾಜ್ಞೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಂದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಈ ರೀತಿಯ ಆಡಳಿತ ಸರಿಯಾದುದಲ್ಲ ಎಂದು ಎಲ್‌ಡಿಎಫ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅಷ್ಟೇ ಅಲ್ಲ, ನಾನು ಈ ಸುಗ್ರೀವಾಜ್ಞೆಗಳನ್ನು ಸಂಪೂರ್ಣವಾಗಿ ಪರಿಶೀಲಿಸದೇ ಅವುಗಳ ಮರು ಜಾರಿಗೆ ಒಪ್ಪಿಗೆ ನೀಡುವುದಿಲ್ಲ ಎಂದೂ ಆರಿಫ್ ಖಾನ್‌ ಅವರು ಸ್ಪಷ್ಟಪಡಿಸಿದ್ದಾರೆ.

ನಾನು, ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಿತಿ ಸಭೆಗೆಂದು ದೆಹಲಿಗೆ ಹೊರಟ ದಿನವೇ 13-14 ಸುಗ್ರೀವಾಜ್ಞೆಗಳನ್ನು ನನಗೆ ಕಳುಹಿಸಲಾಗಿದೆ. ಅವುಗಳನ್ನು ನೋಡಲು ನನಗೆ ಸಮಯ ಸಾಕಾಗುತ್ತಿಲ್ಲ. ಹಿಂದೆ ಮುಂದೆ ಯೋಚಿಸದೇ ಸಹಿ ಹಾಕುವುದು ಸರಿಯೇ? ಪ್ರಜಾಪ್ರಭುತ್ವ ದೇಶದಲ್ಲಿ ಈ ರೀತಿ ಸುಗ್ರೀವಾಜ್ಞೆಗಳ ಮೂಲಕ ಆಡಳಿತ ನಡೆಸುವುದು ಸಮಂಜಸವಾದುದಲ್ಲ ಎಂದು ರಾಜ್ಯಪಾಲ ಖಾನ್‌ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...