Saturday, May 9, 2026
Saturday, May 9, 2026

ಸುಗ್ರೀವಾಜ್ಞೆಗಳಿಗೆ ಪರಿಶೀಲಿಸದೇ ಸಹಿ ಹಾಕಲಾರೆ- ಆರೀಫ್ ಖಾನ್

Date:

ಕೇರಳ ಲೋಕಾಯುಕ್ತ ಸೇರಿದಂತೆ ಅನೇಕ ಸುಗ್ರೀವಾಜ್ಞೆಗಳ ಅವಧಿ ಸೋಮವಾರ ಮುಕ್ತಾಯಗೊಳ್ಳುತ್ತಿರುವಂತೆಯೇ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಅವರು ಸುಗ್ರೀವಾಜ್ಞೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಂದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಈ ರೀತಿಯ ಆಡಳಿತ ಸರಿಯಾದುದಲ್ಲ ಎಂದು ಎಲ್‌ಡಿಎಫ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅಷ್ಟೇ ಅಲ್ಲ, ನಾನು ಈ ಸುಗ್ರೀವಾಜ್ಞೆಗಳನ್ನು ಸಂಪೂರ್ಣವಾಗಿ ಪರಿಶೀಲಿಸದೇ ಅವುಗಳ ಮರು ಜಾರಿಗೆ ಒಪ್ಪಿಗೆ ನೀಡುವುದಿಲ್ಲ ಎಂದೂ ಆರಿಫ್ ಖಾನ್‌ ಅವರು ಸ್ಪಷ್ಟಪಡಿಸಿದ್ದಾರೆ.

ನಾನು, ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಿತಿ ಸಭೆಗೆಂದು ದೆಹಲಿಗೆ ಹೊರಟ ದಿನವೇ 13-14 ಸುಗ್ರೀವಾಜ್ಞೆಗಳನ್ನು ನನಗೆ ಕಳುಹಿಸಲಾಗಿದೆ. ಅವುಗಳನ್ನು ನೋಡಲು ನನಗೆ ಸಮಯ ಸಾಕಾಗುತ್ತಿಲ್ಲ. ಹಿಂದೆ ಮುಂದೆ ಯೋಚಿಸದೇ ಸಹಿ ಹಾಕುವುದು ಸರಿಯೇ? ಪ್ರಜಾಪ್ರಭುತ್ವ ದೇಶದಲ್ಲಿ ಈ ರೀತಿ ಸುಗ್ರೀವಾಜ್ಞೆಗಳ ಮೂಲಕ ಆಡಳಿತ ನಡೆಸುವುದು ಸಮಂಜಸವಾದುದಲ್ಲ ಎಂದು ರಾಜ್ಯಪಾಲ ಖಾನ್‌ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...