Friday, June 13, 2025
Friday, June 13, 2025

ಸುಗ್ರೀವಾಜ್ಞೆಗಳಿಗೆ ಪರಿಶೀಲಿಸದೇ ಸಹಿ ಹಾಕಲಾರೆ- ಆರೀಫ್ ಖಾನ್

Date:

ಕೇರಳ ಲೋಕಾಯುಕ್ತ ಸೇರಿದಂತೆ ಅನೇಕ ಸುಗ್ರೀವಾಜ್ಞೆಗಳ ಅವಧಿ ಸೋಮವಾರ ಮುಕ್ತಾಯಗೊಳ್ಳುತ್ತಿರುವಂತೆಯೇ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಅವರು ಸುಗ್ರೀವಾಜ್ಞೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಂದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಈ ರೀತಿಯ ಆಡಳಿತ ಸರಿಯಾದುದಲ್ಲ ಎಂದು ಎಲ್‌ಡಿಎಫ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅಷ್ಟೇ ಅಲ್ಲ, ನಾನು ಈ ಸುಗ್ರೀವಾಜ್ಞೆಗಳನ್ನು ಸಂಪೂರ್ಣವಾಗಿ ಪರಿಶೀಲಿಸದೇ ಅವುಗಳ ಮರು ಜಾರಿಗೆ ಒಪ್ಪಿಗೆ ನೀಡುವುದಿಲ್ಲ ಎಂದೂ ಆರಿಫ್ ಖಾನ್‌ ಅವರು ಸ್ಪಷ್ಟಪಡಿಸಿದ್ದಾರೆ.

ನಾನು, ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಿತಿ ಸಭೆಗೆಂದು ದೆಹಲಿಗೆ ಹೊರಟ ದಿನವೇ 13-14 ಸುಗ್ರೀವಾಜ್ಞೆಗಳನ್ನು ನನಗೆ ಕಳುಹಿಸಲಾಗಿದೆ. ಅವುಗಳನ್ನು ನೋಡಲು ನನಗೆ ಸಮಯ ಸಾಕಾಗುತ್ತಿಲ್ಲ. ಹಿಂದೆ ಮುಂದೆ ಯೋಚಿಸದೇ ಸಹಿ ಹಾಕುವುದು ಸರಿಯೇ? ಪ್ರಜಾಪ್ರಭುತ್ವ ದೇಶದಲ್ಲಿ ಈ ರೀತಿ ಸುಗ್ರೀವಾಜ್ಞೆಗಳ ಮೂಲಕ ಆಡಳಿತ ನಡೆಸುವುದು ಸಮಂಜಸವಾದುದಲ್ಲ ಎಂದು ರಾಜ್ಯಪಾಲ ಖಾನ್‌ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...