Thursday, August 13, 2026
Thursday, August 13, 2026

ಸುಗ್ರೀವಾಜ್ಞೆಗಳಿಗೆ ಪರಿಶೀಲಿಸದೇ ಸಹಿ ಹಾಕಲಾರೆ- ಆರೀಫ್ ಖಾನ್

Date:

ಕೇರಳ ಲೋಕಾಯುಕ್ತ ಸೇರಿದಂತೆ ಅನೇಕ ಸುಗ್ರೀವಾಜ್ಞೆಗಳ ಅವಧಿ ಸೋಮವಾರ ಮುಕ್ತಾಯಗೊಳ್ಳುತ್ತಿರುವಂತೆಯೇ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಅವರು ಸುಗ್ರೀವಾಜ್ಞೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಂದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಈ ರೀತಿಯ ಆಡಳಿತ ಸರಿಯಾದುದಲ್ಲ ಎಂದು ಎಲ್‌ಡಿಎಫ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅಷ್ಟೇ ಅಲ್ಲ, ನಾನು ಈ ಸುಗ್ರೀವಾಜ್ಞೆಗಳನ್ನು ಸಂಪೂರ್ಣವಾಗಿ ಪರಿಶೀಲಿಸದೇ ಅವುಗಳ ಮರು ಜಾರಿಗೆ ಒಪ್ಪಿಗೆ ನೀಡುವುದಿಲ್ಲ ಎಂದೂ ಆರಿಫ್ ಖಾನ್‌ ಅವರು ಸ್ಪಷ್ಟಪಡಿಸಿದ್ದಾರೆ.

ನಾನು, ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಿತಿ ಸಭೆಗೆಂದು ದೆಹಲಿಗೆ ಹೊರಟ ದಿನವೇ 13-14 ಸುಗ್ರೀವಾಜ್ಞೆಗಳನ್ನು ನನಗೆ ಕಳುಹಿಸಲಾಗಿದೆ. ಅವುಗಳನ್ನು ನೋಡಲು ನನಗೆ ಸಮಯ ಸಾಕಾಗುತ್ತಿಲ್ಲ. ಹಿಂದೆ ಮುಂದೆ ಯೋಚಿಸದೇ ಸಹಿ ಹಾಕುವುದು ಸರಿಯೇ? ಪ್ರಜಾಪ್ರಭುತ್ವ ದೇಶದಲ್ಲಿ ಈ ರೀತಿ ಸುಗ್ರೀವಾಜ್ಞೆಗಳ ಮೂಲಕ ಆಡಳಿತ ನಡೆಸುವುದು ಸಮಂಜಸವಾದುದಲ್ಲ ಎಂದು ರಾಜ್ಯಪಾಲ ಖಾನ್‌ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...