Friday, February 6, 2026
Friday, February 6, 2026

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಪ್ರವಾಹಕ್ಕೆ ಕಾರು ಕೊಚ್ಚಿಹೋದ ಪ್ರಸಂಗ

Date:

ಚಿಕ್ಕ ಮಂಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಹಲವು ಅವಾಂತರಗಳು ಸಂಭವಿಸಿದ್ದು, ಒಬ್ಬ ವ್ಯಕ್ತಿ ಜೀವ ಕಳೆದು ಕೊಂಡಿದ್ದಾರೆ.

ಈ ಬಾರಿಯ ಮುಂಗಾರಿನ ಅಬ್ಬರಕ್ಕೆ ಚಿಕ್ಕಮಗಳೂರಿನಲ್ಲಿ ಒಟ್ಟು ಮೂರು ಮಂದಿ ಪ್ರಾಣ ಕಳೆದುಕೊಂಡಂತಾಗಿದೆ.
ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕಾರೊಂದು ಕೊಚ್ಚಿ ಹೋದ ಪರಿಣಾಮ ಚಾಲಕ ಪ್ರಸನ್ನ (51) ಮೃತ ಪಟ್ಟಿರುವ ಘಟನೆ ಎನ್ ಆರ್ ಪುರ ತಾಲೂಕಿನ ಸಾತ್ಕೊಳ ಗ್ರಾಮದಲ್ಲಿ ನಡೆದಿದೆ.

ಅರಿಶಿಣಗೆರೆಯ ಪ್ರಸನ್ನ ಅವರು ಸಂಬಂಧಿಕರ ಮನೆಗೆ ಶ್ರಾವಣ ಪೂಜೆ ಕಾರ್ಯಕ್ರಮಕ್ಕೆಂದು ಹೋಗುವಾಗ ಕಾರು ಸಮೇತ ಹಳ್ಳಕ್ಕೆ ಬಿದ್ದಿದ್ದಾರೆ. ರಭಸವಾಗಿ ನೀರು ಹರಿಯುತ್ತಿದ್ದ ಕಾರಣ ನೂರಾರು ಮೀಟರ್​ನಷ್ಟು ದೂರ ಕಾರು ಕೊಚ್ಚಿಕೊಂಡು ಹೋಗಿದೆ.

ಸ್ಥಳೀಯರು ಹಳ್ಳದಲ್ಲಿ ಬಿದ್ದಿದ್ದ ಕಾರನ್ನು ಕಂಡು ಪೊಲೀಸರ ಗಮನಕ್ಕೆ ತಂದಿದ್ದು, ನಂತರ ಮೇಲೆತ್ತಲಾಗಿದೆ. ಪ್ರಸನ್ನ ಅವರ ಮೃತ ದೇಹ ಕಾರಿನಲ್ಲಿ ಪತ್ತೆಯಾಗಿದೆ.ಈ ಹಿಂದೆ ಚಿಕ್ಕಮಗಳೂರು ತಾಲೂಕು ಹೊಸಪೇಟೆಯ ಶಾಲಾ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದು, ಇನ್ನೂ ಆಕೆ ಪತ್ತೆಯಾಗಿಲ್ಲ. ಮತ್ತೊಂದು ಪ್ರಕರಣದಲ್ಲಿ ಕಳಸ ತಾಲೂಕಿನ ತೋಟದಲ್ಲಿ ಕೆಲಸ ಮಾಡುವಾಗ ಮರ ಬಿದ್ದು ಯುವತಿಯೊಬ್ಬಳು ಮೃತ ಪಟ್ಟಿದ್ದರು.

ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕುಟುಂಬಸ್ಥರಿಗೆ ಪರಿಹಾರ ವಿತರಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...