Sunday, December 14, 2025
Sunday, December 14, 2025

ಚುನಾವಣಾ ಸಂದರ್ಭದಲ್ಲಿ ಪಕ್ಷಗಳು ನೀಡಿದ ಉಚಿತ ಭರವಸೆಗಳು ಊರ್ಜಿತವಿಲ್ಲ

Date:

ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ನೀಡಿದ ಉಚಿತವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿರುದ್ಧ ಇಂದು ಅರ್ಜಿ ಸಲ್ಲಿಸಿದೆ. ಉಚಿತ ನೀರು, ವಿದ್ಯುತ್ ಮತ್ತು ಸಾರಿಗೆ ಸೌಲಭ್ಯಗಳನ್ನ ಒದಗಿಸುವುದಾಗಿ ಚುನಾವಣಾ ಸಮಯದಲ್ಲಿ ನೀಡಿದ ಭರವಸೆಗಳು ಉಚಿತ ಅಡಿಯಲ್ಲಿ ಬರುವುದಿಲ್ಲ ಎಂದು ಅದು ಹೇಳಿದೆ.

ಅಸಮಾನ ಸಮಾಜದಲ್ಲಿ ಉಚಿತ ನೀರು, ವಿದ್ಯುತ್ ಮತ್ತು ಸಾರಿಗೆ ಸೌಲಭ್ಯಗಳನ್ನ ಒದಗಿಸುವುದು ಅತ್ಯಗತ್ಯ ಎಂದು ಹೇಳಿದರು.

ಭಾರತದ ಸಂವಿಧಾನದ 19ನೇ ವಿಧಿಯ ಪ್ರಕಾರ, ಉಚಿತ ವಿದ್ಯುತ್, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಮತ್ತು ರಾತ್ರಿಯಲ್ಲಿ ಬಡವರಿಗೆ ಶಿಬಿರಗಳನ್ನ ಸ್ಥಾಪಿಸುವ ಬಗ್ಗೆ ಭಾಷಣ ಮಾಡುವುದು ಮತ್ತು ಚುನಾವಣೆಯ ಸಮಯದಲ್ಲಿ ಭರವಸೆಗಳನ್ನ ನೀಡುವುದು ಎಎಪಿಯ ಹಕ್ಕು. ಹಾಗಾಗಿ ಚುನಾವಣೆ ಸಂದರ್ಭದಲ್ಲಿ ಉಚಿತ ವಿದ್ಯುತ್, ನೀರು, ಸಾರಿಗೆ ಸೌಲಭ್ಯದ ಭರವಸೆ ನೀಡಬಾರದು ಎಂಬ ನಿಬಂಧನೆ ತರುವುದು ಸರಿಯಲ್ಲ ಎನ್ನಲಾಗಿದೆ. ಅರ್ಜಿದಾರರು ಚುನಾವಣಾ ಭರವಸೆಗಳಿಂದ ಸಾಮಾಜಿಕ ಮತ್ತು ಕಲ್ಯಾಣ ಕಾರ್ಯಸೂಚಿಯನ್ನು ತೆಗೆದುಹಾಕಲು ಮತ್ತು ಜಾತಿ ಹಾಗೂ ಧಾರ್ಮಿಕ ಭರವಸೆಗಳನ್ನು ನೀಡಲು ಬಯಸುತ್ತಾರೆ ಎಂದು ಅವರು ಹೇಳಿದರು. ಕೇಂದ್ರ ಸರ್ಕಾರದ ಕ್ರಮಗಳು ಶ್ರೀಮಂತರನ್ನು ಶ್ರೀಮಂತರನ್ನಾಗಿಸುವುದಾಗಿದೆ ಎಂದು ಹೇಳಿದೆ.

ಅಂದ ಹಾಗೆ, ಈ ನಡುವೆ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಘೋಷಿಸಿದ ಉಚಿತಗಳ ಬಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಚುನಾವಣೆಗೂ ಮುನ್ನ ಮತದಾರರಿಗೆ ಆಮಿಷ ಒಡ್ಡುವ ಉಚಿತ ಭರವಸೆಗಳು ಗಂಭೀರ ಸಮಸ್ಯೆಯಾಗಿದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ಆದರೆ, ದೆಹಲಿ ಸಿಎಂ ಕೇಜ್ರಿವಾಲ್ ಉಚಿತ ಶಿಕ್ಷಣ, ವಿದ್ಯುತ್ ಮತ್ತು ನೀರು ನೀಡುವುದು ಅಪರಾಧ ಎಂಬ ವಾತಾವರಣವನ್ನ ನಿರ್ಮಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೆಲವರ 10 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದೆ. ಈ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...