Monday, March 23, 2026
Monday, March 23, 2026

ತೀರ್ಥಹಳ್ಳಿಯಲ್ಲಿ ನವೀಕೃತ ಸರ್ಕಾರಿ ಆಸ್ಪತ್ರೆ ಬಗ್ಗೆ ಗೃಹಸಚಿವರ ಶ್ಲಾಘನೆ

Date:

ಕಟ್ಟಡ, ಸುಸಜ್ಜಿತ ಚಾವಣಿ, ಯಂತ್ರೋಪಕರಣ, ಆಕ್ಸಿಜನ್‌ ಪ್ಲಾಂಟ್‌ ಸೌಲಭ್ಯ ಒದಗಿಸಿ ವೈದ್ಯಕೀಯ ಕಾರ್ಯಕ್ಷಮತೆ ಹೆಚ್ಚಿಸಲಾಗುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ತೀರ್ಥಹಳ್ಳಿ ಪಟ್ಟಣದ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ 1.50 ಕೋಟಿ ರೂಪಾಯಿ ವೆಚ್ಚದಲ್ಲಿ 25 ಹಾಸಿಗೆಯ ಐಸಿಯು ಘಟಕ, ಮಳೆಯಿಂದ ಸೋರುತ್ತಿದ್ದ ಆಸ್ಪತ್ರೆಯ ಚಾವಣಿ ಉದ್ಘಾಟಿಸಿ ಮಾತನಾಡಿದರು.

ಆಸ್ಪತ್ರೆಯ ಪರಿವರ್ತನೆಯಿಂದ ಬಡವರು, ದಲಿತರು, ಕೂಲಿಕಾರ್ಮಿಕರು ಸೇರಿದಂತೆ ಎಲ್ಲಾ ವರ್ಗದವರಿಗೂ ಉತ್ತಮ ಚಿಕಿತ್ಸೆ ಸಿಗಲಿದೆ. ತಾಲ್ಲೂಕು ಕಚೇರಿ, ಸರ್ಕಾರಿ ಆಸ್ಪತ್ರೆಯ ಉನ್ನತೀಕರಣಕ್ಕೆ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಶೇಷ ಆದ್ಯತೆಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ತಾಯಿ ಮಕ್ಕಳ ಆಸ್ಪತ್ರೆ ತಾಲ್ಲೂಕಿಗೆ ಮಂಜೂರು ಮಾಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಜೆಸಿ ಆಸ್ಪತ್ರೆಯ ಸಿಬ್ಬಂದಿ, ವೈದ್ಯರು ಉತ್ತಮ ಸೇವಾ ಮನೋಭಾವದಿಂದ ಹಗಲಿರುಳು ಕೆಲಸ ಮಾಡುತ್ತಿದ್ದಾರೆ ಎಂದು ಅಭಿನಂದಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ, ಅಧ್ಯಕ್ಷೆ ಶಬನಮ್,‌ ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ವೈದ್ಯಾಧಿಕಾರಿ ನಟರಾಜ್‌, ಆಸ್ಪತ್ರೆ ವೈದ್ಯಾಧಿಕಾರಿ ಡಾ.ಗಣೇಶ ಭಟ್, ಡಾ. ನಾರಾಯಣ ಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ನಾಗರಾಜ್ ಶೆಟ್ಟಿ, ಸಂದೇಶ್ ಜವಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...