Tuesday, March 24, 2026
Tuesday, March 24, 2026

ನಮ್ಮ ಹೆಮ್ಮೆಯ ರಾಷ್ಡ್ರಧ್ವಜಕ್ಕೆ ಹೇಗೆ ಗೌರವ ಸಲ್ಲಿಸಬೇಕು?

Date:

ಈ ವರ್ಷದ ಸ್ವಾತಂತ್ರ್ಯ ದಿನ ಪ್ರತೀ ವರ್ಷದಂತೆ ಅಲ್ಲ. ನಮಗೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ಪೂರ್ಣಗೊಂಡು ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಆ.13ರಿಂದ 15ರ ವರೆಗೆ ದೇಶದ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಕರೆ ಕೊಟ್ಟಿದ್ದಾರೆ.

ಧ್ವಜದಲ್ಲಿ ಯಾವಾಗಲೂ ಕೇಸರಿ ಬಣ್ಣ ಮೇಲೆ ಬಂದು, ಹಸುರು ಬಣ್ಣ ಕೆಳಗಿರಬೇಕು.
ಹರಿದು ಹೋಗಿರುವ ಧ್ವಜ ಹಾರಿಸುವಂತಿಲ್ಲ. ತ್ರಿವರ್ಣ ಧ್ವಜಕ್ಕಿಂತ ಎತ್ತರದಲ್ಲಿ ಅಥವಾ ಅದಕ್ಕೆ ಸರಿ ಸಮನಾಗಿ ಬೇರೆ ಯಾವುದೇ ಧ್ವಜ ಹಾರಿಸುವಂತಿಲ್ಲ.
ಧ್ವಜವನ್ನು ಅಲಂಕಾರಿಕ ವಸ್ತುವಾಗಿ ಬಳಸುವಂತಿಲ್ಲ.
ತೊಡುವ ಬಟ್ಟೆಯಲ್ಲಿ ಸೊಂಟಕ್ಕಿಂತ ಕೆಳಭಾಗದಲ್ಲಿ ಧ್ವಜವಿರುವಂತಿಲ್ಲ.
ಒಂದೇ ದಾರದಲ್ಲಿ ಎರಡು ಧ್ವಜ ಹಾರಿಸುವಂತಿಲ್ಲ.
ಧ್ವಜವನ್ನು ಯಾವುದೇ ಕಾರಣಕ್ಕೂ ನೆಲಕ್ಕೆ ತಾಕಿಸುವಂತಿಲ್ಲ.

ಧ್ವಜವನ್ನು ಅತ್ಯಂತ ಗೌರವಯುತವಾಗಿ ಹಾರಿಸಬೇಕು. ಧ್ವಜಸ್ತಂಭಕ್ಕೆ ಏರಿಸುವಾಗ ವೇಗವಾಗಿ ಏರಿಸಬೇಕು ಹಾಗೆಯೇ ಸ್ತಂಭದಿಂದ ಇಳಿಸುವಾಗ ನಿಧಾನವಾಗಿ ಇಳಿಸಬೇಕು.

ಒಂದು ವೇಳೆ ಧ್ವಜವು ಹರಿದರೆ, ಅಥವಾ ಬಳಸಲಾರದ ಸ್ಥಿತಿಗೆ ಬಂದರೆ, ಅದನ್ನು ಖಾಸಗಿಯಾಗಿ ಗೌರವಯುತವಾಗಿ ಸುಟ್ಟು ಹಾಕಬೇಕು.

ಧ್ವಜವನ್ನು ಸ್ವಚ್ಛ, ಸಮತಟ್ಟಾದ ಸ್ಥಳದಲ್ಲಿ ಇಟ್ಟುಕೊಳ್ಳಿ. ಮೊದಲಿಗೆ ಕೇಸರಿ ಮತ್ತು ಹಸುರು ಬಣ್ಣದ ಬಟ್ಟೆಯನ್ನು ಬಿಳಿ ಬಣ್ಣದ ಬಟ್ಟೆಯ ಕೆಳಗೆ ಮಡಚಿ. ಆಯತಾಕಾರಾ ದಲ್ಲಿರುವ ಬಿಳಿ ಬಣ್ಣದ ಬಟ್ಟೆಯಲ್ಲಿ ಕೇವಲ ಅಶೋಕ ಚಕ್ರ ಕಾಣುವಂತೆ ಇನ್ನೆರೆಡು ತುದಿಗಳನ್ನು ಮಡಚಿ. ಅನಂತರ ಭದ್ರವಾದ ಸ್ಥಳದಲ್ಲಿ ಇಡಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...