Saturday, February 7, 2026
Saturday, February 7, 2026

ಜಾಗತಿಕ ಕದನ ವಿರಾಮ ಆಯೋಗ ನೇತೃತ್ವಕ್ಕೆ ಭಾರತವೂ ಸೇರ್ಪಡೆ

Date:

ಜಾಗತಿಕ ಕದನ ವಿರಾಮ ಘೋಷಿಸಲು ಭಾರತ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಮತ್ತು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ನೇತೃತ್ವದಲ್ಲಿ ಆಯೋಗ ರಚಿಸುವ ಪ್ರಸ್ತಾಪವನ್ನು ವಿಶ್ವಸಂಸ್ಥೆಯಲ್ಲಿ ಮಂಡಿಸುವುದಾಗಿ ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಹೇಳಿದರು.

ಕನಿಷ್ಠ ಐದು ವರ್ಷಗಳ ಕಾಲ ಕದನ ವಿರಾಮ ಘೋಷಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವುದನ್ನು ಖಚಿತಪಡಿಸಬೇಕಿದೆ ಎಂದರು.

ಮೋದಿ, ಪೋಪ್ ಹಾಗೂ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅವರನ್ನೊಳಗೊಂಡ ಆಯೋಗದ ಮಧ್ಯಸ್ಥಿಕೆಯನ್ನು ವಿಶ್ವದ ಮೂರು ಮಹಾನ್ ಶಕ್ತಿಗಳಾದ ರಷ್ಯಾ, ಚೀನಾ, ಅಮೆರಿಕ ಒಪ್ಪಿಕೊಳ್ಳುತ್ತವೆ ಎಂದು ತಿಳಿಸಿದರು.

ಯುದ್ದವನ್ನು ನಿಲ್ಲಿಸಲು ಈ ಆಯೋಗವು ಭೇಟಿಯಾಗಿ ಪ್ರಸ್ತಾಪವನ್ನು ಸಲ್ಲಿಸಬೇಕಿದೆ. ಕನಿಷ್ಠ ಐದು ವರ್ಷ ಕದನ ವಿರಾಮಕ್ಕಾಗಿ ಒಪ್ಪಂದ ಮಾಡಿಕೊಳ್ಳಬೇಕಿದೆ. ಈ ಮೂಲಕ ಜಗತ್ತಿನೆಲ್ಲೆಡೆಯ ಸರ್ಕಾರಗಳು ವಿಶೇಷವಾಗಿ ಯುದ್ಧಪೀಡಿತ ದೇಶಗಳು ತಮ್ಮ ಜನರಿಗೆ ನೆರವಾಗಬಹುದಾಗಿದೆ ಎಂದು ಒಬ್ರಡಾರ್ ಮಾಡಿರುವ ಪ್ರಸ್ತಾಪದಲ್ಲಿ ಉಲ್ಲೇಖಿಸಲಾಗಿದೆ.
ಇದರಿಂದ ಮುಂದಿನ ಐದು ವರ್ಷ ಯಾವುದೇ ಉದ್ವಿಗ್ನ ವಾತಾವರಣ, ಹಿಂಸಾಚಾರವಿಲ್ಲದೆ ಜಗತ್ತಿನಲ್ಲಿ ಶಾಂತಿ ನೆಲೆಸಲಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಪ್ರತಿಯೊಬ್ಬರೂ ಸಮಾಜಮುಖಿ ಮನೋಭಾವ ಬೆಳೆಸಿಕೊಳ್ಳಬೇಕು- ಪ್ರಭಂಜನ.

Rotary Club Shimoga ಶಾಲೆ, ಮನೆಗಳಲ್ಲಿ ಮಕ್ಕಳಿಗೆ ಸಂಸ್ಕಾರ, ನೈತಿಕ ಮತ್ತು...

Beluru Ramamurthy ಇಂದು‌ ಮಾನವೀಯ ಮೌಲ್ಯಗಳು ಅತ್ಯಂತ ಆವಶ್ಯಕವಾಗಿವೆ- ಬೇಲೂರು ರಾಮ ಮೂರ್ತಿ.

Beluru Ramamurthy ವಿದ್ಯಾರ್ಜನೆಗೆ ಬಂದಿರುವ ಮಕ್ಕಳು ಕಲಿಕೆ ಜೊತೆಗೆ ಕೆಲವು ಗುಣಗಳನ್ನು...

Sagara Marikamba Jatre 2026 ಸಾಗರ ಜಾತ್ರೆಯಲ್ಲಿ ಮಿಂಚಿದ ಸಿನಿಮಾ ತಾರೆಯರಾದ ಧ್ರುವ ಸರ್ಜಾ ಮತ್ತು ರಚಿತಾ ರಾಂ.

Sagara Marikamba Jatre 2026 ಪ್ರಸಿದ್ಧ ಐತಿಹಾಸಿಕ ಸಾಗರದ ಮಾರಿಕಾಂಬ ಜಾತ್ರೆ...