Thursday, April 30, 2026
Thursday, April 30, 2026

ಜಾಗತಿಕ ಕದನ ವಿರಾಮ ಆಯೋಗ ನೇತೃತ್ವಕ್ಕೆ ಭಾರತವೂ ಸೇರ್ಪಡೆ

Date:

ಜಾಗತಿಕ ಕದನ ವಿರಾಮ ಘೋಷಿಸಲು ಭಾರತ ಪ್ರಧಾನಿ ನರೇಂದ್ರ ಮೋದಿ, ಪೋಪ್ ಫ್ರಾನ್ಸಿಸ್ ಮತ್ತು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ನೇತೃತ್ವದಲ್ಲಿ ಆಯೋಗ ರಚಿಸುವ ಪ್ರಸ್ತಾಪವನ್ನು ವಿಶ್ವಸಂಸ್ಥೆಯಲ್ಲಿ ಮಂಡಿಸುವುದಾಗಿ ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಹೇಳಿದರು.

ಕನಿಷ್ಠ ಐದು ವರ್ಷಗಳ ಕಾಲ ಕದನ ವಿರಾಮ ಘೋಷಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವುದನ್ನು ಖಚಿತಪಡಿಸಬೇಕಿದೆ ಎಂದರು.

ಮೋದಿ, ಪೋಪ್ ಹಾಗೂ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅವರನ್ನೊಳಗೊಂಡ ಆಯೋಗದ ಮಧ್ಯಸ್ಥಿಕೆಯನ್ನು ವಿಶ್ವದ ಮೂರು ಮಹಾನ್ ಶಕ್ತಿಗಳಾದ ರಷ್ಯಾ, ಚೀನಾ, ಅಮೆರಿಕ ಒಪ್ಪಿಕೊಳ್ಳುತ್ತವೆ ಎಂದು ತಿಳಿಸಿದರು.

ಯುದ್ದವನ್ನು ನಿಲ್ಲಿಸಲು ಈ ಆಯೋಗವು ಭೇಟಿಯಾಗಿ ಪ್ರಸ್ತಾಪವನ್ನು ಸಲ್ಲಿಸಬೇಕಿದೆ. ಕನಿಷ್ಠ ಐದು ವರ್ಷ ಕದನ ವಿರಾಮಕ್ಕಾಗಿ ಒಪ್ಪಂದ ಮಾಡಿಕೊಳ್ಳಬೇಕಿದೆ. ಈ ಮೂಲಕ ಜಗತ್ತಿನೆಲ್ಲೆಡೆಯ ಸರ್ಕಾರಗಳು ವಿಶೇಷವಾಗಿ ಯುದ್ಧಪೀಡಿತ ದೇಶಗಳು ತಮ್ಮ ಜನರಿಗೆ ನೆರವಾಗಬಹುದಾಗಿದೆ ಎಂದು ಒಬ್ರಡಾರ್ ಮಾಡಿರುವ ಪ್ರಸ್ತಾಪದಲ್ಲಿ ಉಲ್ಲೇಖಿಸಲಾಗಿದೆ.
ಇದರಿಂದ ಮುಂದಿನ ಐದು ವರ್ಷ ಯಾವುದೇ ಉದ್ವಿಗ್ನ ವಾತಾವರಣ, ಹಿಂಸಾಚಾರವಿಲ್ಲದೆ ಜಗತ್ತಿನಲ್ಲಿ ಶಾಂತಿ ನೆಲೆಸಲಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...