Thursday, August 13, 2026
Thursday, August 13, 2026

ನ್ಯಾ.ಭಕ್ತವತ್ಸಲಸಮಿತಿ ವರದಿಗೆ ಸರ್ಕಾರದ ಅಂಗೀಕಾರ

Date:

ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ ಎಂದು ರಾಜ್ಯ ಸರ್ಕಾರ ಸೂಚಿಸಿದೆ.

ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ನ್ಯಾ.ಭಕ್ತವತ್ಸಲ ಸಮಿತಿ ವರದಿಯನ್ನು ಅಂಗೀಕರಿಸಿದ್ದು 2027-28ರಲ್ಲಿ ಹೊಸದಾಗಿ ಹಿಂ.ವರ್ಗಗಳಿಗೆ ರಾಜಕೀಯ ಮೀಸಲಾತಿ ನೀತಿ ಅನ್ವಯ ಚುನಾವಣೆ ನಡೆಸಲಾಗುವುದು. ಈ ವರ್ಷ ಹಳೆಯ ಮೀಸಲಾತಿ ಪಟ್ಟಿಯನ್ನು ಆಧರಿಸಿ ಚುನಾವಣೆ ನಡೆಸಲು ಸಂಪುಟ ತೀರ್ಮಾನ ಮಾಡಿದೆ’ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.

ಈ ವರೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಇರಲಿಲ್ಲ. ಭಕ್ತವತ್ಸಲ ವರದಿ ಅನ್ವಯ ಮೇಯರ್ ಮತ್ತು ಉಪಮೇಯರ್ ಆಯ್ಕೆಯಲ್ಲಿ ಹಿಂದುಳಿದ ವರ್ಗಗಳಿಗೆ ಅವಕಾಶ ಕಲ್ಪಿಸಲಾಗಿದೆ. ಎಸ್ಸಿ-ಎಸ್ಟಿ, ಹಿಂದುಳಿದ ವರ್ಗಗಳಿಗೆ ಶೇ.50ರಷ್ಟು ಮೀಸಲಾತಿ ಪ್ರಮಾಣ ಮೀರದಂತೆ ನೀಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಕ್ಷೇತ್ರದ ಜನಸಂಖ್ಯೆಯನ್ನು ಆಧರಿಸಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಶೇ.13ರಷ್ಟು ಅನ್ವಯವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...