Friday, February 6, 2026
Friday, February 6, 2026

ವಿಶ್ವದಲ್ಲಿ ಯುದ್ಧ ನಿಲ್ಲಬೇಕೆಂದರೆ ಮೋದೀಜಿ ನಾಯಕತ್ವ‌ಬೇಕು- ಜಗ್ಗೇಶ್

Date:

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯುತ್ತಿರುವ ಶ್ರೀ ಗುರುರಾಯರ 351 ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆಯಲ್ಲಿ ಚಿತ್ರನಟ ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ ಶನಿವಾರ ಭಾಗಿಯಾಗಿದ್ದರು.

ಸುಕ್ಷೇತ್ರದ ಮಠಕ್ಕೆ ಆಗಮಿಸಿದ ಜಗ್ಗೇಶ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನದ ದರ್ಶನ, ನಂತರ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ಆಶೀರ್ವಾದವನ್ನು ಪಡೆ​ದ​ರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿಶ್ವದಲ್ಲಿ ಯುದ್ಧಗಳು ನಿಲ್ಲಬೇಕು ಎಂದರೆ ಪ್ರಧಾನಿ ನರೇಂದ್ರ ಮೋದಿ ಅವರಂತಹ ಸಮರ್ಥರು ಬೇಕು. ಪ್ರಪಂಚದ ದೊಡ್ಡ ರಾಷ್ಟ್ರಗಳಾದ ಅಮೆರಿಕ, ರಷ್ಯಾ ಮತ್ತು ಚೀನಾದೊಂದಿಗೆ ಮಾತನಾಡಿ, ಅವರನ್ನು ಸಾತ್ವಿಕರನ್ನಾಗಿಸುವ ಶಕ್ತಿ ಮೋದಿ ಅವರಲ್ಲಿದೆ ಎಂದು ತಿಳಿಸಿದ್ದಾರೆ.

ದೇಶದಾದ್ಯಂತ 75 ನೇ ಸ್ವಾತಂತ್ರ್ಯದ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ದೇಶದ ಪ್ರಜೆಗಳಲ್ಲಿ ದೇಶಭಕ್ತಿಯನ್ನು ಹೆಚ್ಚಿಸುವುದಕ್ಕಾಗಿ ಹರ್‌ ಘರ್‌ ತಿರಂಗಾ ಅಭಿಯಾನವನ್ನು ಕೈಗೊಳ್ಳಲಾಗಿದೆ. ಚಿಕ್ಕಮಕ್ಕಳು ಸಹ ಕೈಯಲ್ಲಿ ರಾಷ್ಟ್ರಧ್ವಜವನ್ನು ಹಿಡಿಯುವುದರಿಂದ ದೇಶದ ಸ್ವಾತಂತ್ರ್ಯದ ಕುರಿತು ತಿಳಿದುಕೊಳ್ಳಲು ಆಸಕ್ತಿ ಮೂಡುತ್ತದೆ. ಮೇಧಾವಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬರಲ್ಲಿಯೂ ರಾಷ್ಟ್ರಭಕ್ತಿಯನ್ನು ಹೆಚ್ಚಿಸಲು ಈ ಯೋಜನೆ ರೂಪಿಸಿದ್ದಾರೆ ಎಂದ ಹೇಳಿದ್ದಾರೆ.

ಸರ್ಕಾರ ರೂಪಿಸುವ ಅಷ್ಟೋ ಯೋಜನೆಗಳು ಜನಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಅವುಗಳಲ್ಲಿ ಸರಿಯಾಗಿ ಓದಿ ತಿಳಿದುಕೊಳ್ಳದಕ್ಕೆ ಸಾಕಷ್ಟುಅನುದಾನಗಳು ವಾಪಸ್ಸು ಹೋಗುತ್ತಿವೆ. ಆದ್ದರಿಂದ, ನಿಜವಾದ ಫಲಾನುಭವಿಗಳಿಗೆ ಯೋಜನೆಗಳ ಲಾಭವೇ ಸಿಗುವುದಿಲ್ಲ. ಎಲ್ಲರು ಯೋಜನೆಗಳನ್ನು ಅರಿತು ಅವುಗಳ ಸದುಪಯೋಗ ಪಡಿಸಿಕೊಳ್ಳಲು ಮುಂದಾಗಬೇಕು. ರಾಜ್ಯಸಭಾ ಸದಸ್ಯನಾಗಿರುವ ನಮಗೆ ಪ್ರಹ್ಲಾದ್‌ ಜೋಶಿ ಮತ್ತು ಸಂತೋಷ ಜೀ ಅವರು ಮಾರ್ಗದರ್ಶನ ಮಾಡುತ್ತಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...