Thursday, April 30, 2026
Thursday, April 30, 2026

ವಿಶ್ವಮಟ್ಟದಲ್ಲಿ ವರ್ಚಸ್ವಿಯಾಗಿದೆ ಭಾರತ-ಪುಟಿನ್

Date:

ವಿಶ್ವ ಮಟ್ಟದಲ್ಲಿ ಭಾರತ ನ್ಯಾಯಸಮ್ಮತವಾದ ವರ್ಚಸ್ಸು ಪಡೆದು ಅದನ್ನು ಸಂಭ್ರಮಿಸುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಶುಭಾಶಯ ಕೋರಿರುವ ಪುಟಿನ್, ಭಾರತೀಯರನ್ನು ಅಭಿನಂದಿಸಿ ದೇಶದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಮ್ಮ ಆತ್ಮೀಯ ಅಭಿನಂದನೆಗಳನ್ನು ಸ್ವೀಕರಿಸಿ. ಸ್ವಾತಂತ್ರ್ಯೋತ್ತರ ಕಾಲಘಟ್ಟದಲ್ಲಿ ನಿಮ್ಮ ದೇಶವು ಆರ್ಥಿಕ, ಸಾಮಾಜಿಕ, ವೈಜ್ಞಾನಿಕ, ತಾಂತ್ರಿಕ ಮತ್ತು ಇತರ ಕ್ಷೇತ್ರಗಳಲ್ಲಿ ಗುರುತರ ಯಶಸ್ಸು ಸಾಧಿಸಿದೆ. ಅಲ್ಲದೇ, ಜಾಗತಿಕ ಮಟ್ಟದಲ್ಲಿ ಭಾರತವು ತನ್ನ ಗಣನೀಯವಾದ ವರ್ಚಸ್ಸನ್ನು ನ್ಯಾಯಸಮ್ಮತವಾಗಿ ಪಡೆದು ಸಂಭ್ರಮಿಸುತ್ತಿದೆ. ಅಂತಾರಾಷ್ಟ್ರೀಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಮುಖ ರಚನಾತ್ಮಕ ಪಾತ್ರ ನಿರ್ವಹಿಸುತ್ತದೆ ಎಂದು ಶ್ಲಾಘಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಷ್ಯಾ ಅಧ್ಯಕ್ಷರು ಅಭಿನಂದಿಸಿ, ಉತ್ತಮ ಆರೋಗ್ಯ ಮತ್ತು ಯಶಸ್ಸು ಸಿಗಲಿ ಎಂದು ಕೋರಿದ್ದಾರೆ. ಮಾಸ್ಕೋ ಹಾಗೂ ನವದೆಹಲಿ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಸಹಕರಿಸುತ್ತಿವೆ. ಯುಎನ್, ಬ್ರಿಕ್ಸ್, ಎಸ್‌ಸಿಒ ಮತ್ತು ಇತರ ಬಹುಪಕ್ಷೀಯ ರಚನೆಗಳ ಚೌಕಟ್ಟಿನೊಳಗೆ ಪರಿಣಾಮಕಾರಿಯಾಗಿ ಸಂವಹನ ನಡೆಸುತ್ತಿವೆ ಎಂದು ಪುಟಿನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...