Friday, May 1, 2026
Friday, May 1, 2026

ಶಾಂತಿ ಕಾಪಾಡಲು ಜನರಿಗೆ ಗೃಹ ಸಚಿವರ ಮನವಿ

Date:

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಹಾಕಿದ್ದ ವೀರ್ ಸಾವರ್ಕರ್‌ ಫ್ಲೆಕ್ಸ್ ತೆಗೆದಿದ್ದರಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ.

ಶಿವಮೊಗ್ಗ ನಗರದಲ್ಲಿ ಎರಡು ಗುಂಪುಗಳ ಮಧ್ಯೆ ವೀರ್ ಸಾವರ್ಕರ್‌ ಫ್ಲೆಕ್ಸ್, ಬ್ಯಾನರ್‌ ಕಟ್ಟುವ ವಿಚಾರ ಸಂಬಂಧ ಭಿನ್ನಾಭಿಪ್ರಾಯ ಉಂಟಾಗಿ ಜಗಳ ನಡೆದು ವ್ಯಕ್ತಿಗೆ ಚಾಕು ಇರಿತ ಉಂಟಾಗಿತ್ತು. ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಶಾಂತಿ ಹದಗೆಟ್ಟಿತ್ತು. ಹೀಗಾಗಿ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಶಾಲೆ ಕಾಲೇಜಿಗೆ ರಜೆ ನೀಡಲಾಗಿದೆ.

ಸದ್ಯ ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು, ಜನರು ಶಾಂತಿ ಕಾಪಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಘಟನೆಯಲ್ಲಿ ಚೂರಿ ಇರಿತಕ್ಕೊಳಗಾದ ಇಬ್ಬರಲ್ಲಿ ಒಬ್ಬರನ್ನು ಭೇಟಿಯಾಗಿ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ‘ನಾವು ಕಳೆದ ಮೂರು ದಿನಗಳಿಂದ ಭಾರತ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ. ಇಂತಹ ಸಂತಸದ ಸಂದರ್ಭದಲ್ಲಿ ಇಂತಹ ಅಹಿತಕರ ಘಟನೆ ನಡೆದಿರುವುದು ದುರಾದೃಷ್ಟಕರ.
ಇಲ್ಲಿ ಪೊಲೀಸರು ಎಲ್ಲಾ ಅಪರಾಧಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ನಿಲ್ಲುತ್ತಾರೆ ಎಂದರು.

ಚೂರಿ ಇರಿತ ಘಟನೆಯ ಹಿಂದಿರುವ ಕೋಮುವಾದಿ ಶಕ್ತಿಗಳನ್ನು ಬಯಲಿಗೆಳೆಯುವ ಅಗತ್ಯವಿದೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಶೀಘ್ರದಲ್ಲೇ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...