Monday, August 24, 2026
Monday, August 24, 2026

ಬೆಂಗಳೂರಿಗೆ ಶೀಘ್ರದಲ್ಲೇ ಜಂಬೋವಿಮಾನ ಹಾರಾಟ ನಿಯೋಜನೆ

Date:

ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ವಿಶಾಲವಾದ ಪ್ರಯಾಣಿಕ ವಿಮಾನವು ನಮ್ಮ ಬೆಂಗಳೂರಿಗೆ ಶೀಘ್ರದಲ್ಲೇ ಬರಲಿದೆ.

ಎಮಿರೇಟ್ಸ್ ಏರ್‌ಲೈನ್ಸ್ ಅಕ್ಟೋಬರ್ 30ರಿಂದ ಬೆಂಗಳೂರು- ದುಬೈ ಮಾರ್ಗದಲ್ಲಿ ಈ ಜಂಬೋ ವಿಮಾನವನ್ನು ಹಾರಾಟಕ್ಕೆ ನಿಯೋಜಿಸಲಿದೆ.

ಎ 380 ಎಂಬುದು ವಿಶ್ವದ ಉದ್ದವಾದ ಡಬಲ್ ಡೆಕ್ಕರ್ ವಿಮಾನವಾಗಿದ್ದು, 500ಕ್ಕಿಂತ ಹೆಚ್ಚು ಆಸನ ಸಾಮರ್ಥ್ಯ ಹೊಂದಿದೆ. ಬೆಂಗಳೂರು ದೆಹಲಿ ಮತ್ತು ಮುಂಬೈ ನಂತರ ಜಂಬೋ ಜೆಟ್ ಅನ್ನು ಇಳಿಸುವ ಮೂರನೇ ಭಾರತೀಯ ನಗರವಾಗಲಿದೆ. ಎಮಿರೇಟ್ಸ್ ಏರ್‌ಲೈನ್ಸ್‌ಗೆ ಬೆಂಗಳೂರು ಎ 380 ವಿಮಾನವನ್ನು ದೈನಂದಿನ ಸೇವೆಯಾಗಿ ನಿಯೋಜಿಸುವ ಎರಡನೇ ಭಾರತೀಯ ನಗರವಾಗಿದೆ.

ಇದಕ್ಕೂ ಮೊದಲು ಎಮಿರೇಟ್ಸ್‌ ವಿಮಾನಯಾನ ಸಂಸ್ಥೆಯು 2014 ರಿಂದ ಮುಂಬೈ- ದುಬೈ ಮಾರ್ಗದಲ್ಲಿ ಎ 380 ಅನ್ನು ಹಾರಿಸುತ್ತಿದೆ.

ಬೆಂಗಳೂರು- ದುಬೈ ಮಾರ್ಗದಲ್ಲಿ ದೈನಂದಿನವಾಗಿ ಎ 380 ವಿಮಾನಗಳು ಮೂರು ವರ್ಗದ ಮಾದರಿಯಲ್ಲಿ ಹಾರಾಟ ನಡೆಸಲಿವೆ. ಅವುಗಳೆಂದರೆ ಎಕಾನಮಿ, ಬಿಸಿನೆಸ್‌ ಮತ್ತು ಫಸ್ಟ್‌ ಕ್ಲಾಸ್‌ ತರಗತಿಗಳಲ್ಲಿ ಆಸನಗಳು ವಿಮಾನದಲ್ಲಿ ಇರಲಿವೆ. ಇಕೆ 568 ಅಕ್ಟೋಬರ್ 30 ರಂದು ಸ್ಥಳೀಯ ಕಾಲಮಾನ ರಾತ್ರಿ 9.25ಕ್ಕೆ ದುಬೈನಿಂದ ಟೇಕ್ ಆಫ್ ಆಗಲಿದ್ದು, ಮರುದಿನ ಮುಂಜಾನೆ 2.30ಕ್ಕೆ ಬೆಂಗಳೂರನ್ನು ತಲುಪಲಿದೆ. ರಿಟರ್ನ್ ಫ್ಲೈಟ್ ಇಕೆ 569 ಅಕ್ಟೋಬರ್ 31 ರಂದು ಬೆಳಿಗ್ಗೆ 4.30ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 7.10ಕ್ಕೆ (ಸ್ಥಳೀಯ ಸಮಯ) ದುಬೈಗೆ ಇಳಿಯುತ್ತದೆ.

ಎ380 ಆಸನಗಳು ಎಕಾನಮಿ ಕ್ಲಾಸ್‌ನಲ್ಲಿ ಹೆಚ್ಚುವರಿ ಲೆಗ್‌ರೂಮ್‌ನೊಂದಿಗೆ ವಿಶಾಲವಾಗಿರುತ್ತವೆ. ಬಿಸಿನೆಸ್ ಕ್ಲಾಸ್ ಸಂಪೂರ್ಣವಾಗಿ ಫ್ಲಾಟ್ ಸೀಟ್‌ಗಳನ್ನು ಹೊಂದಿರುತ್ತದೆ. ಫಸ್ಟ್‌ ಕ್ಲಾಸ್‌ ಖಾಸಗಿ ಸೂಟ್‌ಗಳು ಮತ್ತು ಶವರ್ ಸ್ಪಾಗಳನ್ನು ಹೊಂದಿರುತ್ತದೆ ಎಂದು ಎಮಿರೇಟ್ಸ್‌ ಏರ್‌ಲೈನ್ಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...