Saturday, September 28, 2024
Saturday, September 28, 2024

ದೇಶವು ರಷ್ಯಾದಿಂದ ಕಚ್ಚಾತೈಲ ಖರೀದಿ ಮುಂದುವರೆಸಲಿದೆ

Date:

ಬಹುತೇಕ ಭಾರತೀಯರು ಕಚ್ಛಾ ತೈಲಕ್ಕೆ ಹೆಚ್ಚಿನ ಬೆಲೆಯನ್ನು ಪಾವತಿಸಲು ಸಾಧ್ಯವಿಲ್ಲ. ಆದ್ದರಿಂದ, ದೇಶವು ರಷ್ಯಾದೊಂದಿಗೆ ಕಚ್ಛಾ ತೈಲ ಖರೀದಿ ಒಪ್ಪಂದಗಳನ್ನು ಮುಂದುವರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.

ನಾವು ನಮ್ಮ ಹಿತಾಸಕ್ತಿಗಳ ಕುರಿತಾಗಿ ತುಂಬಾ ಮುಕ್ತ ಮತ್ತು ಪ್ರಾಮಾಣಿಕವಾಗಿದ್ದೇವೆ. ನಾನು 2000 ಡಾಲರ್ ತಲಾದಾಯವನ್ನು ಹೊಂದಿರುವ ದೇಶವನ್ನು ಹೊಂದಿದ್ದೇನೆ. ಇವರು ಹೆಚ್ಚಿನ ಇಂಧನ ಬೆಲೆಗಳನ್ನು ನಿಭಾಯಿಸುವ ಜನರಲ್ಲ. ಹೀಗಾಗಿ ಅವರಿಗೆ ಉತ್ತಮ ವ್ಯವಹಾರವನ್ನು ಒದಗಿಸುವುದು ನನ್ನ ನೈತಿಕ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ತೈಲ ಖರೀದಿಗಳು, ನಿರ್ಬಂಧಗಳು ಇತ್ಯಾದಿಗಳ ವಿಷಯಕ್ಕೆ ಬಂದಾಗ, ಇಂಧನ ಖರೀದಿಗೆ ನಿರ್ಬಂಧಗಳಿವೆ ಎಂಬುದನ್ನು ನಾನು ಗಮನಿಸುತ್ತೇನೆ. ಖಂಡಿತವಾಗಿ, ನಾವು ಕೂಡ ರಷ್ಯಾದಿಂದ ಹೆಚ್ಚುವರಿ ಇಂಧನವನ್ನು ಖರೀದಿಸದಂತೆ ದೇಶಗಳನ್ನು ಪ್ರೋತ್ಸಾಹಿಸುತ್ತಿದ್ದೇವೆ. ಆದರೆ, ಪ್ರತಿಯೊಂದು ದೇಶವೂ ವಿಭಿನ್ನವಾಗಿದೆ. ಹೀಗಾಗಿ ವಿಭಿನ್ನ ಅಗತ್ಯಗಳು ಮತ್ತು ಅವಶ್ಯಕತೆಗಳನ್ನು ಹೊಂದಿರುತ್ತದೆ. ಆದರೆ, ನಾವು ಮಿತ್ರರಾಷ್ಟ್ರಗಳು ಮತ್ತು ಪಾಲುದಾರ ರಾಷ್ಟ್ರಗಳು ರಷ್ಯಾದಿಂದ ಇಂಧನ ಖರೀದಿಯನ್ನು ಹೆಚ್ಚಿಸದಿರಲು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಶುರು ಮಾಡಿದಾಗಿನಿಂದ ಹಲವು ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾದ ಮೇಲೆ ನಿರ್ಬಂಧ ವಿಧಿಸಿದ್ದವು. ಈ ಪೈಕಿ ಅಮೆರಿಕವು ಸೇರಿತ್ತು. ಹೀಗಾಗಿ ಏಪ್ರಿಲ್‌ನಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಜೆ ಬ್ಲಿಂಕೆನ್ ಅವರು, ರಷ್ಯಾದಿಂದ ಹೆಚ್ಚುವರಿ ತೈಲವನ್ನು ಖರೀದಿಸದಂತೆ ಭಾರತವನ್ನು ಒತ್ತಾಯಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...