Monday, February 2, 2026
Monday, February 2, 2026

ದೇಶವು ರಷ್ಯಾದಿಂದ ಕಚ್ಚಾತೈಲ ಖರೀದಿ ಮುಂದುವರೆಸಲಿದೆ

Date:

ಬಹುತೇಕ ಭಾರತೀಯರು ಕಚ್ಛಾ ತೈಲಕ್ಕೆ ಹೆಚ್ಚಿನ ಬೆಲೆಯನ್ನು ಪಾವತಿಸಲು ಸಾಧ್ಯವಿಲ್ಲ. ಆದ್ದರಿಂದ, ದೇಶವು ರಷ್ಯಾದೊಂದಿಗೆ ಕಚ್ಛಾ ತೈಲ ಖರೀದಿ ಒಪ್ಪಂದಗಳನ್ನು ಮುಂದುವರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.

ನಾವು ನಮ್ಮ ಹಿತಾಸಕ್ತಿಗಳ ಕುರಿತಾಗಿ ತುಂಬಾ ಮುಕ್ತ ಮತ್ತು ಪ್ರಾಮಾಣಿಕವಾಗಿದ್ದೇವೆ. ನಾನು 2000 ಡಾಲರ್ ತಲಾದಾಯವನ್ನು ಹೊಂದಿರುವ ದೇಶವನ್ನು ಹೊಂದಿದ್ದೇನೆ. ಇವರು ಹೆಚ್ಚಿನ ಇಂಧನ ಬೆಲೆಗಳನ್ನು ನಿಭಾಯಿಸುವ ಜನರಲ್ಲ. ಹೀಗಾಗಿ ಅವರಿಗೆ ಉತ್ತಮ ವ್ಯವಹಾರವನ್ನು ಒದಗಿಸುವುದು ನನ್ನ ನೈತಿಕ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ತೈಲ ಖರೀದಿಗಳು, ನಿರ್ಬಂಧಗಳು ಇತ್ಯಾದಿಗಳ ವಿಷಯಕ್ಕೆ ಬಂದಾಗ, ಇಂಧನ ಖರೀದಿಗೆ ನಿರ್ಬಂಧಗಳಿವೆ ಎಂಬುದನ್ನು ನಾನು ಗಮನಿಸುತ್ತೇನೆ. ಖಂಡಿತವಾಗಿ, ನಾವು ಕೂಡ ರಷ್ಯಾದಿಂದ ಹೆಚ್ಚುವರಿ ಇಂಧನವನ್ನು ಖರೀದಿಸದಂತೆ ದೇಶಗಳನ್ನು ಪ್ರೋತ್ಸಾಹಿಸುತ್ತಿದ್ದೇವೆ. ಆದರೆ, ಪ್ರತಿಯೊಂದು ದೇಶವೂ ವಿಭಿನ್ನವಾಗಿದೆ. ಹೀಗಾಗಿ ವಿಭಿನ್ನ ಅಗತ್ಯಗಳು ಮತ್ತು ಅವಶ್ಯಕತೆಗಳನ್ನು ಹೊಂದಿರುತ್ತದೆ. ಆದರೆ, ನಾವು ಮಿತ್ರರಾಷ್ಟ್ರಗಳು ಮತ್ತು ಪಾಲುದಾರ ರಾಷ್ಟ್ರಗಳು ರಷ್ಯಾದಿಂದ ಇಂಧನ ಖರೀದಿಯನ್ನು ಹೆಚ್ಚಿಸದಿರಲು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಶುರು ಮಾಡಿದಾಗಿನಿಂದ ಹಲವು ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾದ ಮೇಲೆ ನಿರ್ಬಂಧ ವಿಧಿಸಿದ್ದವು. ಈ ಪೈಕಿ ಅಮೆರಿಕವು ಸೇರಿತ್ತು. ಹೀಗಾಗಿ ಏಪ್ರಿಲ್‌ನಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಜೆ ಬ್ಲಿಂಕೆನ್ ಅವರು, ರಷ್ಯಾದಿಂದ ಹೆಚ್ಚುವರಿ ತೈಲವನ್ನು ಖರೀದಿಸದಂತೆ ಭಾರತವನ್ನು ಒತ್ತಾಯಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...