Monday, February 2, 2026
Monday, February 2, 2026

ಸರ್ಕಾರದ ಯೋಜನೆ ಸೌಲಭ್ಯ ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯ

Date:

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೊರಡಿಸಿದ ಇತ್ತೀಚಿನ ಸುತ್ತೋಲೆಯಂತೆ ಇನ್ನು ಮುಂದೆ ನೀವು ಸರ್ಕಾರಿ ಸಬ್ಸಿಡಿಗಳು ಹಾಗೂ ಪ್ರಯೋಜನಗಳನ್ನು ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯವಾಗಿದೆ.

ಇಲ್ಲವೇ, ಆಧಾರ್‌ ದಾಖಲಾತಿ ಚೀಟಿಯಾದರೂ ಹೊಂದಿರಲೇಬೇಕು.

ಆಧಾರ್‌ ಸಂಖ್ಯೆ ಇಲ್ಲದಿದ್ದರೆ ಸರ್ಕಾರದ ಯಾವುದೇ ಸವಲತ್ತು ಹಾಗೂ ಸಬ್ಸಿಡಿಗಳು ನಿಮಗೆ ಸಿಗುವುದಿಲ್ಲ ಎಂದು ಸುತ್ತೋಲೆ ತಿಳಿಸಿದೆ.

ಯುಐಡಿಎಐ ಕಳೆದ ವಾರ ಎಲ್ಲಾ ಕೇಂದ್ರ ಸಚಿವಾಲಯಗಳು ಹಾಗೂ ರಾಜ್ಯ ಸರ್ಕಾರಗಳಿಗೆ ಈ ಸುತ್ತೋಲೆ ಹೊರಡಿಸಿದೆ.

ಆಧಾರ್ ಸಂಖ್ಯೆ ಹೊಂದಿಲ್ಲದೆ ಸರ್ಕಾರ ನೀಡುವ ಸಬ್ಸಿಡಿಗಳು ಮತ್ತು ಪ್ರಯೋಜನಗಳನ್ನು ಪಡೆಯುತ್ತಿರುವವರಿಗೆ ಆಧಾರ್ ನಿಯಮಗಳನ್ನು ಬಿಗಿಗೊಳಿಸಲು ಆಗಸ್ಟ್ 11 ರಂದು ಈ ಸುತ್ತೋಲೆಯನ್ನು ಹೊರಡಿಸಲಾಗಿದೆ ಎನ್ನಲಾಗಿದೆ. ಸರ್ಕಾರಿ ಯೋಜನೆಗಳ ಅಡಿಯಲ್ಲಿ ಬರುವ ಸವಲತ್ತುಗಳು, ಸಬ್ಸಿಡಿಗಳು ಹಾಗೂ ಸೇವೆಗಳನ್ನು ನೀಡಲು ಫಲಾನುಭವಿಗಳ ಅರ್ಹತೆಯನ್ನು ನಿರ್ಧರಿಸುವ ಸಲುವಾಗಿ ಈಗ ಆಧಾರ್ ಸಂಖ್ಯೆಯನ್ನು ಹೊಂದಿರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಅಲ್ಲದೆ ಸರ್ಕಾರದ ಪ್ರಮಾಣ ಪತ್ರಗಳನ್ನು ಬಯಸಿದರೂ ಕೂಡ ಆಧಾರ್‌ ಕಡ್ಡಾಯ ಎಂದು ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...