Monday, February 2, 2026
Monday, February 2, 2026

ನಗರದಲ್ಲಿ ಸಹಜ ಸ್ಥಿತಿ ಇದೆ. ವ್ಯಾಪಾರಿಗಳಿಗೆ ಅವಕಾಶಕೊಡಿ- ಗೋಪಿನಾಥ್

Date:

ಶಿವಮೊಗ್ಗ ನಗರದಲ್ಲಿ ಬುಧವಾರದಿಂದ ಸಂಜೆಯ ನಂತರ ವ್ಯಾಪಾರ – ವಹಿವಾಟಿಗೆ ಪೊಲೀಸರು ಅವಕಾಶ ನಿರಾಕರಿಸುತ್ತಿದ್ದು, ಇದರಿಂದ ವರ್ತಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ. ನಿಯಮಾನುಸಾರ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗೆ ಮನವಿ ಪತ್ರ ಅರ್ಪಿಸಿದೆ.

ಈ ಹಿನ್ನೆಲೆಯಲ್ಲಿ ನಗರದ ಡಿಸಿ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಲಾಯಿತು.

ಸಂಜೆಯ ನಂತರ ವ್ಯಾಪಾರ – ವಹಿವಾಟಿಗೆ ನಿರ್ಬಂಧ ಹಾಕುತ್ತಿರುವುದರಿಂದ ಉದ್ದಿಮೆದಾರರಿಗೆ ಅಪಾರ ನಷ್ಟ ಉಂಟಾಗುತ್ತಿದೆ. ಸದ್ಯ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಕಾನೂನು-ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಈ ಹಿನ್ನಲೆಯಲ್ಲಿ ಸಂಜೆಯ ನಂತರವೂ ವ್ಯಾಪಾರ ವಹಿವಾಟಿಗೆ ನಿಯಮಾನಸಾರ ಅವಕಾಶ ನೀಡಬೇಕು ಎಂದು ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...