Saturday, December 6, 2025
Saturday, December 6, 2025

ಸಂಸ್ಕೃತ ಗ್ರಾಮದ ಬಗ್ಗೆ ಮೆಚ್ಚಿದ ಎಡಿಜಿಪಿ ಅಲೋಕ್ ಕುಮಾರ್

Date:

ಸಾರ್ವಕರ್ ಫ್ಲೆಕ್ಸ್​ ವಿಚಾರದಲ್ಲಿ ಶಿವಮೊಗ್ಗದಲ್ಲಿ ಉಂಟಾಗಿದ್ದ ಪರಿಸ್ಥಿತಿಯಿಂದ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು.

ಈ ವೇಳೆ, ಸಂಸ್ಕೃತ ಗ್ರಾಮ ಮತ್ತೂರಿಗೂ ಭೇಟಿ, ಇಲ್ಲಿನ ಗ್ರಾಮಸ್ಥರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದಾರೆ. ಆ ವಿಡಿಯೋವನ್ನು ಅಲೋಕ್ ಕುಮಾರ್​ ಅವರು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಶಿವಮೊಗ್ಗ ನಗರದಿಂದ 10 ಕಿಮೀ ದೂರವಿರುವ ಮತ್ತೂರು ಗ್ರಾಮಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಸಿಕ್ಕವರ ಜೊತೆ ಸಂಸ್ಕೃತದಲ್ಲಿಯೇ ಮಾತನಾಡಿದ್ದಾರೆ. ಇದು ಒಂದು ರೀತಿ ಸಹಜ ಸಂಭಾಷಣೆ ಎಂಬುವಂತೆ ಇದೆ.
ಎಡಿಜಿಪಿ ಅಲೋಕ್ ಕುಮಾರ್ ಸಂಸ್ಕೃತ ಗ್ರಾಮ ಮತ್ತೂರಿಗೆ ಭೇಟಿ
ಈ ವಿಚಾರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೊಸ್ಟ್ ಮಾಡಿದ್ದಾರೆ.

‘ಸಂಸ್ಕೃತ ಒಂದು ಶಾಸ್ತ್ರೀಯ ಭಾಷೆ, ಅದರ ದನಿಯೇ ಕಿವಿಗೆ ಸಂಗೀತವಿದ್ದಂತೆ, ಈ ನಿಟ್ಟಿನಲ್ಲಿ ಮತ್ತೂರಿಗೆ ಭೇಟಿ ನೀಡಿ ಅಲ್ಲಿನವರ ಜೊತೆ ಒಂದಿಷ್ಟು ಮಾತುಕತೆ ನಡೆಸಿದೆ. ಎಲ್ಲ ಶಾಸ್ತ್ರೀಯ ಭಾಷೆಗಳನ್ನು ರಕ್ಷಿಸುವ ಹಾಗೂ ಪ್ರೋತ್ಸಾಹಿಸುವ ಅಗತ್ಯತೆ ಇದೆ’ ಎಂದು ಅಲೊಕ್ ಕುಮಾರ್ ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...