Wednesday, October 2, 2024
Wednesday, October 2, 2024

ಶಿವಮೊಗ್ಗ ತಾಲೂಕಿನಾದ್ಯಂತ ಸೆ.144 ಜಾರಿಮಾಡಿದ ಜಿಲ್ಲಾಧಿಕಾರಿ

Date:

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಭಾವಚಿತ್ರದ ಫಿಕ್ಸ್ ಹಾಕುವ ಸಂಬಂಧ ಶಿವಮೊಗ್ಗ ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಿದ ವೀರ ಸಾವರ್ಕರ್ ಫ್ಲೆಕ್ಸ್ ನ್ನು ತೆಗೆದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನಾದ್ಯಂತ ದಿನಾಂಕ 18-08-2022ರ ರಾತ್ರಿ 10 ಗಂಟೆಯಿಂದ ದಿನಾಂಕ 20-08-2022ರ ಬೆಳಿಗ್ಗೆ 6 ವರೆಗೆ ಉಲ್ಲೇಖ (2)ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿತ್ತು. ಶಿವಮೊಗ್ಗದ ಪ್ರಸ್ತುತ ಪರಿಸ್ಥಿತಿಯನ್ನ ಅವಲೋಕಿಸಿ ಸಾರ್ವಜನಿಕರ ಶಾಂತಿ ಮತ್ತು ಕಾನೂನು ವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನಾದ್ಯಂತ ಸಿ ಆರ್ ಪಿ ಸಿ ಕಲಂ 144ರ ನ್ವಯ ಪ್ರತಿಬಂಧಕಾಜ್ಞೆಯನ್ನು ಆಗಸ್ಟ್ 20ರಿಂದ ಆ. 23ರವರೆಗೆ ವಿಸ್ತರಿಸಲಾಗಿದೆ ಎಂದು ಡಾ. ಸೆಲ್ವಮಣಿ ಅವರು ತಿಳಿಸಿದ್ದಾರೆ.

ಅವರ ಆದೇಶದ ಪ್ರಕಾರ ಐದು ಹಾಗೂ ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನ ನಿಷೇಧಿಸಲಾಗಿದೆ. ಯಾವುದೇ ಮೆರವಣಿಗೆ, ಸಭೆ ,ಸಮಾರಂಭ ಗಳು, ವಿಜಯೋತ್ಸವ ಹಾಗೂ ಸಾರ್ವಜನಿಕ ಪ್ರತಿಭಟನಾ ಮೆರವಣಿಗೆ, ಜಾಥಾ, ಧರಣಿ, ಸಾರ್ವಜನಿಕ ಅಥವಾ ರಾಜಕೀಯ ಸಮಾರಂಭಗಳನ್ನ ನಡೆಸುವಂತಿಲ್ಲ. ಚಿತ್ರಮಂದಿರಗಳನ್ನೂ ಸಹ ರಾತ್ರಿ 10ಗಂಟೆಯ ಒಳಗೆ ಬಂದ್ ಮಾಡಬೇಕು.ಅಂಗಡಿ ಮುಂಗಟ್ಟುಗಳನ್ನು ರಾತ್ರಿ 8ಗಂಟೆಯ ಒಳಗೆಮುಚ್ಚ ಬೇಕು ಎಂದು ಡಾ. ಸೆಲ್ವ ಮಣಿ ಅವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...