Sunday, December 14, 2025
Sunday, December 14, 2025

ಶಿವಮೊಗ್ಗ ತಾಲೂಕಿನಾದ್ಯಂತ ಸೆ.144 ಜಾರಿಮಾಡಿದ ಜಿಲ್ಲಾಧಿಕಾರಿ

Date:

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಭಾವಚಿತ್ರದ ಫಿಕ್ಸ್ ಹಾಕುವ ಸಂಬಂಧ ಶಿವಮೊಗ್ಗ ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಿದ ವೀರ ಸಾವರ್ಕರ್ ಫ್ಲೆಕ್ಸ್ ನ್ನು ತೆಗೆದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನಾದ್ಯಂತ ದಿನಾಂಕ 18-08-2022ರ ರಾತ್ರಿ 10 ಗಂಟೆಯಿಂದ ದಿನಾಂಕ 20-08-2022ರ ಬೆಳಿಗ್ಗೆ 6 ವರೆಗೆ ಉಲ್ಲೇಖ (2)ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿತ್ತು. ಶಿವಮೊಗ್ಗದ ಪ್ರಸ್ತುತ ಪರಿಸ್ಥಿತಿಯನ್ನ ಅವಲೋಕಿಸಿ ಸಾರ್ವಜನಿಕರ ಶಾಂತಿ ಮತ್ತು ಕಾನೂನು ವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನಾದ್ಯಂತ ಸಿ ಆರ್ ಪಿ ಸಿ ಕಲಂ 144ರ ನ್ವಯ ಪ್ರತಿಬಂಧಕಾಜ್ಞೆಯನ್ನು ಆಗಸ್ಟ್ 20ರಿಂದ ಆ. 23ರವರೆಗೆ ವಿಸ್ತರಿಸಲಾಗಿದೆ ಎಂದು ಡಾ. ಸೆಲ್ವಮಣಿ ಅವರು ತಿಳಿಸಿದ್ದಾರೆ.

ಅವರ ಆದೇಶದ ಪ್ರಕಾರ ಐದು ಹಾಗೂ ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನ ನಿಷೇಧಿಸಲಾಗಿದೆ. ಯಾವುದೇ ಮೆರವಣಿಗೆ, ಸಭೆ ,ಸಮಾರಂಭ ಗಳು, ವಿಜಯೋತ್ಸವ ಹಾಗೂ ಸಾರ್ವಜನಿಕ ಪ್ರತಿಭಟನಾ ಮೆರವಣಿಗೆ, ಜಾಥಾ, ಧರಣಿ, ಸಾರ್ವಜನಿಕ ಅಥವಾ ರಾಜಕೀಯ ಸಮಾರಂಭಗಳನ್ನ ನಡೆಸುವಂತಿಲ್ಲ. ಚಿತ್ರಮಂದಿರಗಳನ್ನೂ ಸಹ ರಾತ್ರಿ 10ಗಂಟೆಯ ಒಳಗೆ ಬಂದ್ ಮಾಡಬೇಕು.ಅಂಗಡಿ ಮುಂಗಟ್ಟುಗಳನ್ನು ರಾತ್ರಿ 8ಗಂಟೆಯ ಒಳಗೆಮುಚ್ಚ ಬೇಕು ಎಂದು ಡಾ. ಸೆಲ್ವ ಮಣಿ ಅವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...