Saturday, December 13, 2025
Saturday, December 13, 2025

ದೂರವಾಣಿ ಸಂಪರ್ಕ ಕಾಲುಸಂಕ ನಿರ್ಮಾಣಕ್ಕೆ ಸಂಸದ ರಾಘವೇಂದ್ರ ಮನವಿ

Date:

ಕೇಂದ್ರ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸ್ಥಾಯಿ ಸಮಿತಿ ದಿನಾಂಕ 20.08.2022ರಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಈ ಸಭೆಯಲ್ಲಿ ಸಮಿತಿಯ ಸದಸ್ಯರಾದ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ರವರು ಭಾಗವಹಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೂರವಾಣಿ ಸಂಪರ್ಕ, ಅಂಗನವಾಡಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸುವ ಬಗ್ಗೆ ಹಾಗೂ ಕಾಲುಸಂಕಗಳ ( ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಿ ಕೂಡಲೇ ಈ ವಿಷಯಗಳ ಬಗ್ಗೆ ಗಮನಹರಿಸಿ ಸೂಕ್ತ ಪರಿಹಾರವನ್ನು ನೀಡುವ ಬಗ್ಗೆ ವಿನಂತಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಇಲಾಖೆಗಳ ಮುಖ್ಯಸ್ಥರು, ರಾಜ್ಯ ಲೀಡ್ ಬ್ಯಾಂಕಿನ ಮುಖ್ಯಸ್ಥರಾದ ಕೆನರಾ ಬ್ಯಾಂಕು, ಯೂನಿಯನ್ ಬ್ಯಾಂಕ್ ಮುಖ್ಯಸ್ಥರು ಹಾಗೂ ಇತರ ಅಧಿಕಾರಿಗಳೊಂದಿಗೆ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಟಾನದ ಬಗ್ಗೆ ಸಹ ಚರ್ಚಿಸಲಾಯಿತು. ಹಾಗೂ ರಾಜ್ಯದ ವಿವಿಧ ಕೈಗಾರಿಕೋಧ್ಯಮದವರೊಂದಿಗೆ ಸಿ.ಎಸ್.ಆರ್. ಫಂಡ್ ಅನ್ನು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬಳಸುವ ಬಗ್ಗೆ ಸಹ ಚರ್ಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ಪ್ರತಾಪ್ ರಾವ್ ಜಾಧವ್, ಸಮಿತಿಯ ಇತರ ಸಂಸತ್ ಸದಸ್ಯರು, ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತಾ ಶರ್ಮ ಮತ್ತು ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್ ಕೆ ಅತಿಕ್ ಮತ್ತಿತರೆ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

G. Parameshwara ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

G. Parameshwara ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ...

Adichunchanagiri Mutt ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರ ಆಯೋಜನೆ

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ...