Thursday, April 30, 2026
Thursday, April 30, 2026

ಶಿವಮೊಗ್ಗ ಜಿಲ್ಲೆಯ ನಾಲ್ಕು ಅದ್ಭುತಗಳಿಗೆ ನೀವೀಗ ವೋಟ್ ಮಾಡಬೇಕು

Date:

ವಿಶ್ವದ ಏಳು ಅದ್ಭುತಗಳು ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಶಿವಮೊಗ್ಗದ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.

ಶಿವಮೊಗ್ಗ ಜಿಲ್ಲೆಯ ನಾಲ್ಕು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ನಾಲ್ಕು ಸ್ಥಳಗಳಿಗೆ ವೋಟ್ ಮಾಡುವ ಮೂಲಕ ನೀವು ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದು.
.ಈಗಾಗಲೇ

https://www.7wondersofkarnataka.com ನಾಮನಿರ್ದೇಶನಗೊಂಡಿರುವ ನೂರು ಅದ್ಭುತಗಳ ಸಾಲಿನಲ್ಲಿ ನಿಂತಿರುವ ಶಿವಮೊಗ್ಗದ ಈ ನಾಲ್ಕು ಸ್ಥಳಗಳ ಪೈಕಿ ನಿಮ್ಮ ಆಯ್ಕೆಯ ಸ್ಥಳಕ್ಕೆ ತಲಾ 10 ವೋಟ್ ಮಾಡಿ ಇವನ್ನು ರಾಜ್ಯದ ಏಳು ಅದ್ಭುತಗಳನ್ನಾಗಿಸಬಹುದು.

ಶಿವಮೊಗ್ಗದ ನಾಮ ನಿರ್ದೇಶನಗಳು

ರಾಜ, ರಾಕೆಟ್, ರೋರರ್, ಲೇಡಿ ಎಂಬ ಶರಾವತಿಯ ನಾಲ್ಕು ಧಾರೆಗಳು ಅಬ್ಬರಿಸಿ ಭೋರ್ಗರೆಯುವ ಜಗತ್ಪಸಿದ್ಧ

ಜೋಗ ಜಲಪಾತ. ಸಹ್ಯಾದ್ರಿ ಶ್ರೇಣಿಯ ಮಳೆಕಾಡಿನಲ್ಲಿರುವ ಸಮುದ್ರಮಟ್ಟದಿಂದ 1354 ಮೀಟರ್ ಎತ್ತರದಲ್ಲಿರುವ ಚಾರಣಿಗರ ನೆಚ್ಚಿನ ತಾಣ ಕೊಡಚಾದ್ರಿ ಬೆಟ್ಟ, ದಕ್ಷಿಣದ ಚಿರಾಪುಂಜಿ ಎಂಬ ಹಿರಿಮೆ ಹೊಂದಿದ್ದ ಅದ್ಭುತ ಪ್ರಕೃತಿ ಸೌಂದರ್ಯದ, ಸೂರ್ಯಾಸ್ತ ವೀಕ್ಷಣೆಗೂ ಪ್ರಸಿದ್ಧವಾದ ತಾಣ ಆಗುಂಬೆ ಘಾಟಿ. 1500 ವರ್ಷ ಹಳೆಯ, ಹಮ್ಮಿಡಿಗಿಂತಲೂ ಪುರಾತನವಾದ ಶಾಸನ ತಾಳಗುಂದ ಶಿಲಾ ಶಾಸನ.

ಪ್ರಸ್ತುತ 100 ಅದ್ಭುತಗಳ ಪಟ್ಟಿಯಲ್ಲಿರುವ ಸ್ಥಳಗಳಲ್ಲಿ ಅತಿ ಹೆಚ್ಚು ವೋಟ್ ಪಡೆದ ಸ್ಥಳಗಳು ಮುಂದಿನ ಹಂತದಲ್ಲಿ ಅಂತಿಮ 49ರ ಪಟ್ಟಿಗೆ ಬರಲಿವೆ. ತದನಂತರ ಅಂತಿಮ 21ರ ಪಟ್ಟಿಯಲ್ಲಿ ಉಳಿದು ಬಳಿಕ ಪ್ರವಾಸೋದ್ಯಮ ಇಲಾಖೆ ತಜ್ಞರ ಸಮಿತಿಯ ಆಯ್ಕೆಯಂತೆ ಕರ್ನಾಟಕದ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಬಹುದು. ಹೀಗಾಗಿ ಶಿವಮೊಗ್ಗ ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಪಾಲಿನ ಹತ್ತು ವೋಟ್‌ಗಳನ್ನು ತಮ್ಮ ನೆಚ್ಚಿನ ಸ್ಥಳಕ್ಕೆ ನೀಡಬಹುದು.ಜತೆಗೆ ಸ್ನೇಹಿತರು, ಕುಟುಂಬ ಸದಸ್ಯರೂ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬಹುದು.

ಏನಿದು ಅಭಿಯಾನ?

ಪ್ರಪಂಚದ ಏಳು ಅದ್ಭುತಗಳನ್ನು ಎಂದೋ ಹುಡುಕಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ‘ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್’ ಸಂಸ್ಥೆಯು ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ.

ವೋಟಿಂಗ್ ನಿಯಮ:

ಆಯ್ಕೆಯಾಗಿರುವ ನೂರು ಅದ್ಭುತಗಳಿಗೂ ವೋಟ್ ಹಾಕಬಹುದು.

• ಪ್ರತಿಯೊಂದು ಅದ್ಭುತಕ್ಕೂ ಹತ್ತು ವೋಟ್ ಮಾಡಲು ಅವಕಾಶವಿರುತ್ತದೆ

• ಈ ಮೆಗಾ ಅಭಿಯಾನದ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದವರಿಗೂ ತಿಳಿಸಿ

ತನ್ಮೂಲಕ ನಿಮ್ಮ ಜಿಲ್ಲೆಯ ಸ್ಥಳವನ್ನು ಅದ್ಭುತವನ್ನಾಗಿಸಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...