Sunday, December 14, 2025
Sunday, December 14, 2025

ಕನ್ನಡಪರ ಸಂಘಟನೆ ಅಧ್ಯಕ್ಷರಿಗೆ ಕದಂಬ ರತ್ನ ಪ್ರಶಸ್ತಿ

Date:

ಬನವಾಸಿ ತಾಲೂಕಿನ ಹೋರಾಟ ಸಮಿತಿ ಅಧ್ಯಕ್ಷ ಉದಯಕುಮಾರ್ ಕಾನಳ್ಳಿ ಅವರಿಗೆ ರಾಜ್ಯ ಕನ್ನಡ ಪರ ಸಂಘಟನೆ ಕದಂಬ ಸೈನ್ಯ ವತಿಯಿಂದ ‘ಕದಂಬರತ್ನ ಪ್ರಶಸ್ತಿ – 2022’ ನೀಡಿ ಗೌರವಿಸಿದೆ.
ಜುಲೈ 26ರಂದು ಮಂಡ್ಯದಲ್ಲಿ ನಡೆದ ಕನ್ನಡ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿತ್ತು.
ಸಂಘಟನೆ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಅವರು ಕಾನಳ್ಳಿ ಅವರ ಮನೆಗೆ ಬಂದು ಈ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ಈ ಹಿಂದೆ ಎಂಟು ವರ್ಷಗಳ ಕಾಲ ಉದಯ್ ಕಾನಳ್ಳಿ ಅವರು ಸಂಘಟನೆಯ ರಾಜ್ಯ ಸಂಚಾಲಕರಾಗಿ ಕೆಲಸ ಮಾಡಿದ್ದರು.
ಉದಯಕುಮಾರ್ ಕಾನಳ್ಳಿ ಅವರ ಕುರಿತು ಮಾತನಾಡಿದ ರಾಜ್ಯಾಧ್ಯಕ್ಷ ರಮೇಶ್ ಅವರು, ಕನ್ನಡ ಪರ ಸಂಘಟನೆ ಕಟ್ಟುವಲ್ಲಿ ಮತ್ತು ಬೆಳೆಸುವಲ್ಲಿ ಕಾನಳ್ಳಿ ಅವರು ನಿರಂತರವಾಗಿ ಶ್ರಮಿಸಿದ್ದಾರೆ. ಇವರ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದರು.

ಉದಯ್ ಕಾನಳ್ಳಿ ಅವರ ಸಾಮಾಜಿಕ ಸೇವೆ , ಕನ್ನಡಪರ ಕಾರ್ಯಗಳನ್ನು ಮನಗಂಡು ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ರಾಜ್ಯ ಸಮಿತಿ ಸದಸ್ಯ ಮಹಾದೇವ್ ಸ್ವಾಮಿ ಮೈಸೂರ್ ಗುತ್ಯಪ್ಪ ಮಾದರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...