Sunday, December 14, 2025
Sunday, December 14, 2025

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಡಿ,31 ರೊಳಗೆ ಉತ್ತೀರ್ಣರಾಗಲು ಗಡುವು

Date:

ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ರ ನಿಯಮ 1(3) ರಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಹೊರತುಪಡಿಸಿ ಇನ್ನಿತರೆ ಎಲ್ಲಾ ಅಭ್ಯರ್ಥಿಗಳು ಡಿ.31ರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗಿರುತ್ತದೆ.

ಸದರಿ ದಿನಾಂಕದ ನಂತರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ ಮತ್ತು ಸರ್ಕಾರವು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲವೆಂದು ಸ್ಪಷ್ಟಪಡಿಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮುಂದಾಗಬಹುದಾದ ಅನಾನುಕೂಲಗಳನ್ನು ತಪ್ಪಿಸುವ ದೃಷ್ಟಿಯಿಂದ ಪರೀಕ್ಷೆ ಪಡೆಯದಿರುವ ಬಳ್ಳಾರಿ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಪ್ರತಿ ಶನಿವಾರ ಮತ್ತು ಭಾನುವಾರ ನಡೆಯಲಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು ಡಿ.31ರೊಳಗಾಗಿ ಉತ್ತೀರ್ಣರಾಗಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರಾದ ಎಂ.ಶಿವಾಜಿರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ಗುರುತಿನ ಚೀಟಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಲು ಜಿಲ್ಲಾಧಿಕಾರಿಗಳು ತುರ್ತು ಸಂದೇಶದಲ್ಲಿ ಸೂಚಿಸಿರುತ್ತಾರೆ.

ಆ ಮೇರೆಗೆ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಗೂಗಲ್ ಪ್ಲೇ ಸ್ಟೋರ್ ನಲ್ಲಿ ‘ವೋಟರ್ ಹೆಲ್ಪ್ ಲೈನ್’ ಅಯಪ್ ಡೌನ್ ಲೋಡ್ ಮಾಡಿಕೊಂಡು ಆ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬಸ್ತರ ಮತದಾರರ ಗುರುತಿನ ಚೀಟಿಗಳನ್ನು ಸಂಬಂಧಿಸಿದ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...