Thursday, April 30, 2026
Thursday, April 30, 2026

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಡಿ,31 ರೊಳಗೆ ಉತ್ತೀರ್ಣರಾಗಲು ಗಡುವು

Date:

ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ರ ನಿಯಮ 1(3) ರಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಹೊರತುಪಡಿಸಿ ಇನ್ನಿತರೆ ಎಲ್ಲಾ ಅಭ್ಯರ್ಥಿಗಳು ಡಿ.31ರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗಿರುತ್ತದೆ.

ಸದರಿ ದಿನಾಂಕದ ನಂತರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ ಮತ್ತು ಸರ್ಕಾರವು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲವೆಂದು ಸ್ಪಷ್ಟಪಡಿಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮುಂದಾಗಬಹುದಾದ ಅನಾನುಕೂಲಗಳನ್ನು ತಪ್ಪಿಸುವ ದೃಷ್ಟಿಯಿಂದ ಪರೀಕ್ಷೆ ಪಡೆಯದಿರುವ ಬಳ್ಳಾರಿ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಪ್ರತಿ ಶನಿವಾರ ಮತ್ತು ಭಾನುವಾರ ನಡೆಯಲಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು ಡಿ.31ರೊಳಗಾಗಿ ಉತ್ತೀರ್ಣರಾಗಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರಾದ ಎಂ.ಶಿವಾಜಿರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ಗುರುತಿನ ಚೀಟಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಲು ಜಿಲ್ಲಾಧಿಕಾರಿಗಳು ತುರ್ತು ಸಂದೇಶದಲ್ಲಿ ಸೂಚಿಸಿರುತ್ತಾರೆ.

ಆ ಮೇರೆಗೆ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಗೂಗಲ್ ಪ್ಲೇ ಸ್ಟೋರ್ ನಲ್ಲಿ ‘ವೋಟರ್ ಹೆಲ್ಪ್ ಲೈನ್’ ಅಯಪ್ ಡೌನ್ ಲೋಡ್ ಮಾಡಿಕೊಂಡು ಆ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬಸ್ತರ ಮತದಾರರ ಗುರುತಿನ ಚೀಟಿಗಳನ್ನು ಸಂಬಂಧಿಸಿದ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...