Monday, December 15, 2025
Monday, December 15, 2025

ಸಿದ್ದರಾಮಯ್ಯ ಅವರಿಗೀಗ ತಪ್ಪಿನ ಅರಿವಾಗಿದೆ-ಶಾಮನೂರು ಶಿವಶಂಕರಪ್ಪ

Date:

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಈಗ ತಪ್ಪಿನ ಅರಿವಾಗಿದೆ ಎಂದು ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹೇಳಿದ್ದಾರೆ.

ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಚೊಚ್ಚಲ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಸ್ವಾಮಿಗಳ ಸಮ್ಮುಖದಲ್ಲಿ ಲಿಂಗಾಯತ – ವೀರಶೈವ ಧರ್ಮ ಒಡೆದ ಆರೋಪದ ಬಗ್ಗೆ ಮಾತನಾಡುತ್ತಾ ಪಶ್ಚಾತಾಪ, ವಿಶಾದ ವ್ಯಕ್ತಪಡಿಸಿದ ಕುರಿತು ಮಾತನಾಡಿದ ಅವರು ಸಿದ್ದರಾಮಯ್ಯ ಪಶ್ಚಾತ್ತಾಪ ಪಟ್ಟಿದ್ದಾರೆ ಅಲ್ಲಿಗೆ ಮುಗಿತು. ನಾನು ಮತ್ತೊಮ್ಮೆ ಧರ್ಮ ಹೊಡೆಯುವ ಪ್ರಯತ್ನಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯನಿಗೆ ಒಳ್ಳೆಯ ಬುದ್ದಿ ಬಂದಿದೆ. ಅದರಲ್ಲಿ ಅವರ ಪಾತ್ರ ಏನು ಇಲ್ಲ, ಬೇರೆಯವರ ಒತ್ತಡ ಇತ್ತು. ಆ ಆರೋಪ ಮಾತ್ರ ಅವರ ಮೇಲೆ ಬಂತು ಅಷ್ಟೇ. ನಾನು ಈ ಬಾರಿ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.

ಯಡಿಯೂರಪ್ಪ ನವರಿಗೆ ಸಂಸದೀಯ ಸ್ಥಾನ ವಿಚಾರವಾಗಿ ಮಾತನಾಡಿದ ಅವರು ಬಿ ಎಸ್​ ಯಡಿಯೂರಪ್ಪ ಒಬ್ಬರಿಂದ ಏನ್ ಮಾಡೋಕೆ ಆಗೋದಿಲ್ಲ. ಸರ್ಕಾರ ನಾವು ರಚನೆ ಮಾಡುತ್ತೇವೆ, ನಮ್ಮ ಸರ್ಕಾರವೇ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...