Friday, December 5, 2025
Friday, December 5, 2025

ಆ್ಯಸಿಡ್ ಸಂತ್ರಸ್ತರಿಗೆ ಸರ್ಕಾರದಿಂದ ಸೈಟ್ ಹಾಗೂ ಮನೆ ನಿರ್ಮಾಣಕ್ಕೆ ಅನುವು- ಅಶೋಕ್

Date:

ರಾಜ್ಯ ಸರ್ಕಾರವು ಆ್ಯಸಿಡ್ ಸಂತ್ರಸ್ತರಿಗೆ 10 ಸಾವಿರ ರೂ. ಪಿಂಚಣಿ ನೀಡಲಾಗುತ್ತಿದ್ದು, ಅವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಉಚಿತ ಸೈಟ್ ನೀಡಿ ಮನೆ ನಿರ್ಮಾಣಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯ ಸೇಡಂ ತಾಲೂಕಿನ ಆಡಕಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಆಯೋಜಿಸಿದ ಗ್ರಾಮ ವಾಸ್ತವ್ಯ ಮತ್ತು ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂತ್ರಸ್ತರಿಗೆ ಈ ಹಿಂದೆ 3 ಸಾವಿರ ರೂ. ಪಿಂಚಣಿ ಕೊಡಲಾಗುತಿತ್ತು, ಅದನ್ನು ಈಗ 10 ಸಾವಿರ ರೂ. ಗಳಿಗೆ ಹೆಚ್ಚಳ ಮಾಡಿದೆ. ಇದಲ್ಲದೆ ಅವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಉಚಿತ ಸೈಟ್ ನೀಡಿ ಮನೆ ನಿರ್ಮಾಣಕ್ಕೆ ಅನುವು ಮಾಡಿಕೊಡಲಾಗುವುದು. ಸ್ವಯಂ ಉದ್ಯೋಗ ಮಾಡಲು ಸಂತ್ರಸ್ತರು ಮುಂದೇ ಬಂದಲ್ಲಿ 5 ಲಕ್ಷ ರೂ. ವರೆಗೆ ಧನಸಹಾಯ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕಂದಾಯ ಸಚಿವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...