Sunday, August 23, 2026
Sunday, August 23, 2026

ತಾಂಡಾ ಮತ್ತು ಹಟ್ಟಿ ಗಳಿಗೆ ಕಂದಾಯ ಗ್ರಾಮವಾಗಿ ಮಾನ್ಯತೆ- ಅಶೋಕ್

Date:

ರಾಜ್ಯದಲ್ಲಿ ಲಂಬಾಣಿ ಸಮುದಾಯ ವಾಸಿಸುವ ತಾಂಡಾ ಹಾಗೂ ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುತ್ತಿದೆ. ಪ್ರಾಯೋಗಿಕವಾಗಿ ಕಲಬುರಗಿ ಜಿಲ್ಲೆಯಿಂದಲೆ ಇದಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಅರ್.ಅಶೋಕ ಅವರು ಘೋಷಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯ ಸೇಡಂ ತಾಲೂಕಿನ ಆಡಕಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಆಯೋಜಿಸಿದ ಗ್ರಾಮ ವಾಸ್ತವ್ಯ ಮತ್ತು ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಲಬುರಗಿ ಜಿಲ್ಲೆಯ 453 ತಾಂಡಾಗಳನ್ನು ಪೈಲೇಟ್ ಯೋಜನೆಯಡಿ ಕೈಗೆತ್ತಿಕೊಂಡು ಕಂದಾಯ ಗ್ರಾಮಗಳನ್ನಾಗಿ ಮುಂದಿನ ಎರಡು ತಿಂಗಳಲ್ಲಿ ಮಾಡಲಾಗುತ್ತದೆ. ಇದಲ್ಲದೆ ಪ್ರಸ್ತುತ ತಾಂಡಾ, ಹಟ್ಟಿಯಲ್ಲಿ ಅನಧಿಕೃತವಾಗಿ ವಾಸಿಸುವರನ್ನು ಅಧಿಕೃತಗೊಳಿಸಿ ಎಷ್ಟು ವಿಸ್ತೀರ್ಣದಲ್ಲಿ ಇದ್ದಾರೆ ಅಷ್ಟು ಜಾಗದ ನಿವೇಶನ, ಮನೆ ಅವರ ಹೆಸರಿಗೆ ನೋಂದಣಿ ಮಾಡಿಸಿ ಮನೆ ಕಟ್ಟಲು ಆರ್ಥಿಕ ಸಹಾಯಧನ ನೀಡಲಾಗುತ್ತದೆ. ರಾಜ್ಯದಲ್ಲಿ ಏಕಕಾಲದಲ್ಲಿ 30 ಸಾವಿರ ಜನರಿಗೆ ಹಕ್ಕು ಪತ್ರ ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ತಿಳಿಸಿದ್ದಾರೆ.

ರೈತ ಮಕ್ಕಳಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಿದೆ. ಕೃಷಿ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣ ಪಡೆಯಬೇಕು ಎಂಬ ನಿಟ್ಟಿನಲ್ಲಿ ಇಂಜಿನೀಯರಿಂಗ್, ವೈದ್ಯಕೀಯ, ಶಿಕ್ಷಣ, ವಕೀಲ ವೃತ್ತಿಯ ಉನ್ನತ ಶಿಕ್ಷಣ ಪಡೆಯಲು ಅವರ ಮಕ್ಕಳಿಗೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಸವಿತಾ, ಕುಂಬಾರ, ಬಡಿಗೇರ್ ಸಮುದಾಯದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 50 ಸಾವಿರ ರೂ. ಉದ್ಯೋಗ ನಿಧಿ ನೀಡಲಾಗುವುದು ಎಂದು ಘೋಷಣೆ ಮಾಡಿದರು.

ಮನೆ‌, ಮನೆಗೆ ಕಂದಾಯ ದಾಖಲೆಗಳು ಅಭಿಯಾನದಲ್ಲಿ 50 ಸಾವಿರ ಜನರಿಗೆ ಜಾತಿ, ಆದಾಯ, ಅಟ್ಲಾಸ್, ಪಹಣಿ ಪತ್ರಗಳನ್ನು ನೀಡಲಾಗಿದೆ.

ಕಳೆದ 10 ಗ್ರಾಮ ವಾಸ್ತವ್ಯದಲ್ಲಿ ಇಂದಿಲ್ಲಿ ದಾಖಲೆ ಪ್ರಮಾಣದಲ್ಲಿ 28,900 ಜನರಿಗೆ ಸೌಲಭ್ಯ ವಿತರಿಸಲಾಗುತ್ತಿದೆ ಎಂದ ಅವರು ಇದು ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಪ್ರತಿಫಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...