Tuesday, April 22, 2025
Tuesday, April 22, 2025

ಸುಳ್ಳು ವರದಿ ಪ್ರಕಟಿಸಿದ ಸುದ್ದಿಗಾರರ ಮೇಲೆ ಕೇಸ್ ದಾಖಲು

Date:

ಆಂಬ್ಯುಲೆನ್ಸ್ ಇಲ್ಲದ ಸಂದರ್ಭದಲ್ಲಿ ಕುಟುಂಬವೊಂದು ವೃದ್ದನನ್ನು ಕೈಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಕಳಪೆ ಆರೋಗ್ಯ ಸೌಲಭ್ಯಗಳನ್ನು ಎತ್ತಿ ತೋರಿಸುವ ರೀತಿಯಲ್ಲಿ ತಪ್ಪು ಮಾಹಿತಿಯುಳ್ಳ ಸುದ್ದಿ ವರದಿ ಮಾಡಿದ ಮೂವರು ಪತ್ರಕರ್ತರ ವಿರುದ್ಧ ಮಧ್ಯಪ್ರದೇಶದ ಭಿಂದ್ ಪೊಲೀಸರು ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 420 (ನಕಲಿ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನ ಪ್ರಕಾರ, 76 ವರ್ಷದ ಗಯಾ ಪ್ರಸಾದ್ ಅವರ ಕುಟುಂಬಕ್ಕೆ ಆಂಬ್ಯುಲೆನ್ಸ್ ಲಭ್ಯವಾಗದ ಕಾರಣ, ಸರ್ಕಾರದ ಯೋಜನೆಗಲು ಲಭ್ಯವಾಗದ ಕಾರಣ ಅವರನ್ನು ಕೈಗಾಡಿಯಲ್ಲಿ ಕರೆದೊಯ್ಯಬೇಕಾಯಿತು ಎಂದು ಮೂವರು ಪತ್ರಕರ್ತರು ಆಗಸ್ಟ್ 15 ರಂದು ಸುದ್ದಿ ಪ್ರಕಟಿಸಿದ್ದರು ಎಂದು ದೂರುದಾರರು ತಿಳಿಸಿದರು.

ಗಯಾ ಪ್ರಸಾದ್ ಎಂಬುವವರ ಅವರ ಮಗ ಪುರಾನ್ ಸಿಂಗ್ ಅವರು ನಾವು ಆಂಬ್ಯುಲೆನ್ಸ್‌ಗೆ ಕರೆ ಮಾಡಿರಲಿಲ್ಲ ಮತ್ತು ತಂದೆ ಮತ್ತು ಕುಟುಂಬ ವೃದ್ಧಾಪ್ಯ ವೇತನದಂತಹ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದೆ ಎಂದು ಹೇಳಿದ್ದರಿಂದ ಸಮಿತಿಯು ಸುದ್ದಿ ವರದಿಯನ್ನು ಸುಳ್ಳು ಎಂದು ಕಂಡುಹಿಡಿದಿದೆ. ಅಲ್ಲದೆ, ಗಯಾ ಪ್ರಸಾದ್ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು ಮತ್ತು ಸರ್ಕಾರಿ ಆಸ್ಪತ್ರೆಗೆ ಅಲ್ಲ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.,

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....