Monday, February 2, 2026
Monday, February 2, 2026

ಗ್ರಾಮ ವಾಸ್ತವ್ಯದ ಲಾಭ ಪಡೆಯಲು ಸಾರ್ವಜನಿಕರಿಗೆ ಕರೆ

Date:

ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿಗಳನ್ನು ಸ್ಥಳದಲ್ಲೇ ಸ್ವೀಕರಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮವನ್ನು ಪ್ರತಿ 3ನೇ ಶನಿವಾರದಂದು ಆಯ್ದ ಗ್ರಾಮಗಳಲ್ಲಿ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಇಂದು ಭದ್ರಾವತಿ ತಾಲ್ಲೂಕಿನ ಕಸಬಾ ಹೋಬಳಿಯ ಹುಣಸೆಕಟ್ಟೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈಗಾಗಲೇ ಹಲವು ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದ್ದು, ಇನ್ನೂ ಗ್ರಾಮಸ್ಥರು, ಸುತ್ತಮುತ್ತಲ ಗ್ರಾಮಸ್ಥರಿಂದ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರೋಪಾಯ ಕುರಿತು ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭದ್ರಾವತಿ ಶಾಸಕರಾದ ಬಿ.ಕೆ.ಸಂಗಮೇಶ್ವರ್, ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಎಸಿ ದೊಡ್ಡಗೌಡರ್, ಭದ್ರಾವತಿ ತಹಶೀಲ್ದಾರ್, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...