Sunday, December 14, 2025
Sunday, December 14, 2025

ಜಲಸಂಪನ್ಮೂಲ ಇಲಾಖೆಯಲ್ಲಿ ಇಂಜಿನಿಯರ್ ನೇಮಕ ಆದೇಶ ವಿತರಣೆ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಜಲ ಸಂಪನ್ಮೂಲ ಇಲಾಖೆ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಕಿರಿಯ ಎಂಜಿನಿಯರ್‌ ಮತ್ತು ಸಹಾಯಕ ಎಂಜಿನಿಯರ್‌ಗಳು ಸೇರಿ 160 ಮಂದಿಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ನೇಮಕಾತಿ ಆದೇಶ ವಿತರಿಸಿದರು.

2020ರಲ್ಲಿ ಈ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿತ್ತು. 2021ರಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಿಂಧುತ್ವ ಪ್ರಮಾಣಪತ್ರ ಸಲ್ಲಿಕೆ ವಿಳಂಬದ ಕಾರಣದಿಂದ ನೇಮಕಾತಿ ಆದೇಶ ನೀಡುವುದು ತಡವಾಗಿತ್ತು.

ಆಯ್ಕೆಯಾದವರಿಗೆ ನೇಮಕಾತಿ ಆದೇಶ ವಿತರಿಸಿ ಮಾತನಾಡಿದ ಕಾರಜೋಳ ಅವರು, ‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371-ಜೆ ತಿದ್ದುಪಡಿ ಜಾರಿಯಾದ ಬಳಿಕ ಆ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಮೀಸಲಾತಿ ದೊರಕುತ್ತಿದೆ.

ಆರಂಭದ ವರ್ಷ
ಗಳಲ್ಲಿ ಇತರ ಭಾಗದ ಸರ್ಕಾರಿ ನೌಕರರೇ ಆ ಸೌಲಭ್ಯ ದುರ್ಬಳಕೆ ಮಾಡಿಕೊಂಡಿದ್ದರು. ಈಗ ಅದಕ್ಕೆ ಕಡಿವಾಣ ಹಾಕಿದ್ದೇವೆ. ಕಲ್ಯಾಣ ಕರ್ನಾಟಕದ ಹುದ್ದೆಗಳಿಗೆ ನೇಮಕಗೊಂಡವರು ಇತರೆಡೆ ಹುದ್ದೆ ಬಯಸಬೇಡಿ’ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...