Saturday, May 23, 2026
Saturday, May 23, 2026

ಜಲಸಂಪನ್ಮೂಲ ಇಲಾಖೆಯಲ್ಲಿ ಇಂಜಿನಿಯರ್ ನೇಮಕ ಆದೇಶ ವಿತರಣೆ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಜಲ ಸಂಪನ್ಮೂಲ ಇಲಾಖೆ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಕಿರಿಯ ಎಂಜಿನಿಯರ್‌ ಮತ್ತು ಸಹಾಯಕ ಎಂಜಿನಿಯರ್‌ಗಳು ಸೇರಿ 160 ಮಂದಿಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ನೇಮಕಾತಿ ಆದೇಶ ವಿತರಿಸಿದರು.

2020ರಲ್ಲಿ ಈ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿತ್ತು. 2021ರಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಿಂಧುತ್ವ ಪ್ರಮಾಣಪತ್ರ ಸಲ್ಲಿಕೆ ವಿಳಂಬದ ಕಾರಣದಿಂದ ನೇಮಕಾತಿ ಆದೇಶ ನೀಡುವುದು ತಡವಾಗಿತ್ತು.

ಆಯ್ಕೆಯಾದವರಿಗೆ ನೇಮಕಾತಿ ಆದೇಶ ವಿತರಿಸಿ ಮಾತನಾಡಿದ ಕಾರಜೋಳ ಅವರು, ‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371-ಜೆ ತಿದ್ದುಪಡಿ ಜಾರಿಯಾದ ಬಳಿಕ ಆ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಮೀಸಲಾತಿ ದೊರಕುತ್ತಿದೆ.

ಆರಂಭದ ವರ್ಷ
ಗಳಲ್ಲಿ ಇತರ ಭಾಗದ ಸರ್ಕಾರಿ ನೌಕರರೇ ಆ ಸೌಲಭ್ಯ ದುರ್ಬಳಕೆ ಮಾಡಿಕೊಂಡಿದ್ದರು. ಈಗ ಅದಕ್ಕೆ ಕಡಿವಾಣ ಹಾಕಿದ್ದೇವೆ. ಕಲ್ಯಾಣ ಕರ್ನಾಟಕದ ಹುದ್ದೆಗಳಿಗೆ ನೇಮಕಗೊಂಡವರು ಇತರೆಡೆ ಹುದ್ದೆ ಬಯಸಬೇಡಿ’ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF)...