Wednesday, July 8, 2026
Wednesday, July 8, 2026

ಜಲಸಂಪನ್ಮೂಲ ಇಲಾಖೆಯಲ್ಲಿ ಇಂಜಿನಿಯರ್ ನೇಮಕ ಆದೇಶ ವಿತರಣೆ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಜಲ ಸಂಪನ್ಮೂಲ ಇಲಾಖೆ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಕಿರಿಯ ಎಂಜಿನಿಯರ್‌ ಮತ್ತು ಸಹಾಯಕ ಎಂಜಿನಿಯರ್‌ಗಳು ಸೇರಿ 160 ಮಂದಿಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ನೇಮಕಾತಿ ಆದೇಶ ವಿತರಿಸಿದರು.

2020ರಲ್ಲಿ ಈ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿತ್ತು. 2021ರಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಿಂಧುತ್ವ ಪ್ರಮಾಣಪತ್ರ ಸಲ್ಲಿಕೆ ವಿಳಂಬದ ಕಾರಣದಿಂದ ನೇಮಕಾತಿ ಆದೇಶ ನೀಡುವುದು ತಡವಾಗಿತ್ತು.

ಆಯ್ಕೆಯಾದವರಿಗೆ ನೇಮಕಾತಿ ಆದೇಶ ವಿತರಿಸಿ ಮಾತನಾಡಿದ ಕಾರಜೋಳ ಅವರು, ‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371-ಜೆ ತಿದ್ದುಪಡಿ ಜಾರಿಯಾದ ಬಳಿಕ ಆ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಮೀಸಲಾತಿ ದೊರಕುತ್ತಿದೆ.

ಆರಂಭದ ವರ್ಷ
ಗಳಲ್ಲಿ ಇತರ ಭಾಗದ ಸರ್ಕಾರಿ ನೌಕರರೇ ಆ ಸೌಲಭ್ಯ ದುರ್ಬಳಕೆ ಮಾಡಿಕೊಂಡಿದ್ದರು. ಈಗ ಅದಕ್ಕೆ ಕಡಿವಾಣ ಹಾಕಿದ್ದೇವೆ. ಕಲ್ಯಾಣ ಕರ್ನಾಟಕದ ಹುದ್ದೆಗಳಿಗೆ ನೇಮಕಗೊಂಡವರು ಇತರೆಡೆ ಹುದ್ದೆ ಬಯಸಬೇಡಿ’ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...