Wednesday, July 9, 2025
Wednesday, July 9, 2025

ಕೊರೋನ ನಂತರ ಕರ್ನಾಟಕವೂ ಸೇರಿ ದೇಶದ19ರಾಜ್ಯಗಳ ಆರ್ಥಿಕತೆ ಚೇತರಿಕೆ

Date:

ಕೊರೊನಾ ಸೋಂಕಿನ ಆಘಾತದಿಂದ ಪಾತಾಳಕ್ಕಿಳಿದಿದ್ದ ಆರ್ಥಿಕತೆಗಳು ಈಗ ಪುಟಿದೇಳಲಾರಂಭಿಸಿವೆ.

ಕರ್ನಾಟಕ ಸೇರಿದಂತೆ 19 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ನಿಟ್ಟಿನಲ್ಲಿ ಧನಾತ್ಮಕ ಬೆಳವಣಿಗೆಯನ್ನು ಕಂಡಿದ್ದು, 2021-22ರ ಹಣಕಾಸು ವರ್ಷದಲ್ಲಿ ಎರಡಂಕಿ ಪ್ರಗತಿಯನ್ನು ಸಾಧಿಸಿವೆ.

21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಅಧಿಕೃತ ದತ್ತಾಂಶಗಳ ವಿಶ್ಲೇಷಣೆಯಿಂದ ಈ ಅಂಶ ತಿಳಿದುಬಂದಿದೆ.

ಆದರೆ, ಗುಜರಾತ್‌ ಹಾಗೂ ಮಹಾರಾಷ್ಟ್ರ ಸೇರಿದಂತೆ 11 ರಾಜ್ಯಗಳ ಪ್ರಗತಿ ದರದ ಅಂಕಿಅಂಶ ಲಭ್ಯವಾಗಿಲ್ಲ.
ಈ ವಿಶ್ಲೇಷಣೆಯ ಪ್ರಕಾರ, ಕೇಂದ್ರ ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ರಾಷ್ಟ್ರೀಯ ಲಾಕ್‌ಡೌನ್‌ ಹೇರಿದಾಗ ಕುಸಿದಿದ್ದ 19 ರಾಜ್ಯಗಳು- ಕೇಂದ್ರಾಡಳಿತ ಪ್ರದೇಶಗಳ ಜಿಎಸ್‌ಡಿಪಿ(ರಾಜ್ಯದ ಒಟ್ಟು ಆಂತರಿಕ ಉತ್ಪನ್ನ) ದರ 2021-22ರಲ್ಲಿ ಕೊರೊನಾಪೂರ್ವ ಮಟ್ಟಕ್ಕೆ ತಲುಪಿದೆ.

ಇಂಥ ಸಾಧನೆ ಮಾಡಿದ ರಾಜ್ಯಗಳೆಂದರೆ, ಕರ್ನಾಟಕ, ಆಂಧ್ರಪ್ರದೇಶ, ರಾಜಸ್ಥಾನ, ಬಿಹಾರ, ತೆಲಂಗಾಣ, ದೆಹಲಿ, ಒಡಿಶಾ, ಮಧ್ಯಪ್ರದೇಶ, ಹರ್ಯಾಣ, ತ್ರಿಪುರ, ಸಿಕ್ಕಿಂ, ಹಿಮಾಚಲಪ್ರದೇಶ, ಮೇಘಾಲಯ, ಜಾರ್ಖಂಡ್‌, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ, ಪಂಜಾಬ್‌ , ಉತ್ತರಾಖಂಡ ಮತ್ತು ಪುದುಚೇರಿ.

ಕೇಂದ್ರ ಸರ್ಕಾರದ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಅಂಕಿಅಂಶಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ನವದೆಹಲಿಯಲ್ಲಿ”ಸಿಎಂ”ಸಿದ್ಧರಾಮಯ್ಯ ಅವರಿಂದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಭೇಟಿ

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ...

Rotary Club ರೋಟರಿ ಕ್ಲಬ್ ರಿವರ್ ಸೈಡ್ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಸನ್ಮಾನ

Rotary Club 24 ವರ್ಷಗಳಿಂದ ನಿರಂತರವಾಗಿ ಮನುಕುಲದ ಸೇವೆಯಲ್ಲಿ ಹಾಗೂ ಸಮಾಜಮುಖಿ...

Sitaramchandra Temple ಭಗವದ್ಗೀತೆಯ ಜ್ಞಾನದಿಂದ ಸಮಾಜದಲ್ಲಿ ಶಾಂತಿ & ಮಾನವೀಯತೆ ಸ್ಥಾಪನೆ- ಅಶೋಕ ಭಟ್

Sitaramchandra Temple ಭಗವದ್ಗೀತಾ ಜ್ಞಾನವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಸರ್ವರೂ ಸಮಾನರಾಗಿ ಸಮಾಜದಲ್ಲಿ...

Congress Karnataka ಕೆಪಿಸಿಸಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್.ರಮೇಶ್

Congress Karnataka ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ...