Wednesday, April 30, 2025
Wednesday, April 30, 2025

ಗಣೇಶೋತ್ಸವದಲ್ಲಿ ಕಳೆದ ಬಾರಿಯ ಸೂಚನೆಗಳನ್ನೇ ಪಾಲಿಸಿ- ಲಕ್ಷ್ಮೀಪ್ರಸಾದ್

Date:

ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಈ ಹಿಂದೆ ವಿಧಿಸಿದ್ದ ನಿರ್ಬಂಧಗಳನ್ನು ಸಂಘ-ಸಂಸ್ಥೆಗಳು ಪಾಲಿಸಬೇಕು. ಹೊಸ ನಿರ್ಬಂಧಗಳನ್ನು ಹೇರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ತಿಳಿಸಿದ್ದಾರೆ.

ಗಣಪತಿ ಹಬ್ಬದ ಅಂಗವಾಗಿ ಪೊಲೀಸ್ ಇಲಾಖೆ ಏರ್ಪಡಿಸಿದ್ದ ಸಾಗರದ ಶಾರದಾಂಬ ಸಭಾ ಭವನದಲ್ಲಿ, ಮತ್ತು ಭದ್ರಾವತಿಯ ವಿವಿಧ ಸಂಘ-ಸಂಸ್ಥೆಗಳ ಮುಖಂಡರ ಜೊತೆ ಏರ್ಪಡಿಸಿದ್ದ, ಶಾಂತಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಯಾವುದೇ ರೀತಿಯ ಕಾನೂನು ಉಲ್ಲಂಘನೆ ಯಂತಹ ಚಟುವಟಿಕೆಗೆ ಅವಕಾಶ ಇಲ್ಲ. ಎಲ್ಲರೂ ಕಾನೂನು ಪಾಲನೆ ಮಾಡಬೇಕು. ಶಾಂತಿಯುತವಾಗಿ ಹಬ್ಬವನ್ನು ಆಚರಿಸಬೇಕು ಎಂದು ಮನವಿ ಮಾಡಿಕೊಂಡರು.

ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಹಿಂದೆಯೇ ನಿರ್ಬಂಧಗಳನ್ನು ಹೇರಲಾಗಿದೆ. ಈ ಬಾರಿಯೂ ಅದೇ ನಿರ್ಬಂಧಗಳು ಮುಂದುವರೆಯಲಿವೆ. ಗಣಪತಿಯ ವಿಗ್ರಹದ ವಿಸರ್ಜನೆಗೆ ನಿಗದಿಪಡಿಸಿದ ಸಮಯದಲ್ಲಿ ನೆರವೇರಿಸುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಮನವಿ ಮಾಡಿದರು.

ಗಣಪತಿ ಪೆಂಡಾಲ್ ನಿರ್ಮಿಸುವವರು ಸುರಕ್ಷತೆ ದೃಷ್ಟಿಯಿಂದ ಅಳವಡಿಸುವುದು ಸೂಕ್ತ. ಪೆಂಡಾಲ್ ನಲ್ಲಿ ವಿದ್ಯುತ್, ಅಗ್ನಿ ಅವಘಡಕ್ಕೆ ಅವಕಾಶವಾಗದಂತೆ ಮುಂಜಾಗ್ರತ ಕ್ರಮವನ್ನು ವಹಿಸಬೇಕು ಎಂದು ಲಕ್ಷ್ಮೀ ಪ್ರಸಾದ್ ಅವರು ಸಲಹೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...