Friday, December 5, 2025
Friday, December 5, 2025

ನಾಲಗೆ ಕತ್ತರಿಸ್ತೀವಿ- ಕೆಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರದ ಒಕ್ಕಣೆ

Date:

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನವರಿಗೆ ಅನಾಮಧೇಯ ಪತ್ರ ಬರೆದಿರುವ ದುಷ್ಕರ್ಮಿಗಳು ಮಗನೇ ನಿನ್ನ ನಾಲಗೆ ಕತ್ತರಿಸುತ್ತೇವೆ ಎಂದು ಬೆದರಿಸಿದ್ದಾರೆ.

ಶಿವಮೊಗ್ಗದ ಮಲ್ಲೇಶ್ವರನಗರದಲ್ಲಿರುವ ಈಶ್ವರಪ್ಪನವರ ಮನೆಗೆ ಅನಾಮಧೇಯ ಪತ್ರ ಬಂದಿದೆ. ನಿರಂತರವಾಗಿ ಮುಸ್ಲಿಂರನ್ನು ಟೀಕಿಸುತ್ತಾ, ಮುಸ್ಲಿಂರನ್ನು ಗೂಂಡಾಗಳು ಎಂದು ಕರೆಯುವ ನಿನ್ನನ್ನು ಬಿಡುವುದಿಲ್ಲ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆ ಬೆನ್ನೂರಿನಲ್ಲಿ ಕಾಲೇಜು ಕಟ್ಟಲು ಮುಸ್ಲಿಂ ಸಿಮೆಂಟ್ ಬ್ರಿಕ್ಸ್ ಗಳನ್ನು ಬಳಸುತ್ತಿದ್ದೀರಾ. ಆದರೂ ನಿಮಗೆ ಮುಸ್ಲಿಂರು ಬೇಡ. ನಿನಗೆ ನಾಚಿಕೆಯಾಗಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.

ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಈ ರೀತಿಯ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ತನಿಖೆ ನಡೆಸಿ ಹೇಡಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಈಶ್ವರಪ್ಪನವರು ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...