Monday, February 2, 2026
Monday, February 2, 2026

ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕ ಹಿನ್ನೆಲೆ ಪ್ರತಿಭಟನೆ

Date:

ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ
ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಳಪೆ ಅವೈಜ್ಞಾನಿಕ ಕಾಮಗಾರಿಯ ಖಂಡಿಸಿ 5ನೇ ಸರಣಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದ ಪೊಲೀಸ್ ಚೌಕಿಯಲ್ಲಿ ಕಾಮಗಾರಿ ನಡೆದ ಎರಡೇ ತಿಂಗಳಲ್ಲಿ 100 ಅಡಿ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿವೆ.

ಅಸಂಬದ್ಧ ಡ್ರೈನ್ ಸ್ಲಾಬ್‌ಗಳ ಜೋಡಣೆ ಮಾಡಲಾಗಿದೆ. * ಹತ್ತಾರು ಕಡೆ ಗುಂಡಿ ಬಿದ್ದ ಪುಟ್‌ ಪಾತ್‌ಗಳು ಕಂಡುಬರುತ್ತಿದೆ.
ಅವೈಜ್ಞಾನಿಕ ಗ್ರಿಟ್ ಚೇಂಬರ್ ಅಳವಡಿಕೆಯಿಂದ ಚರಂಡಿಗೆ ನೀರು ಹರಿಯುತ್ತಿಲ್ಲ * ಕನಿಷ್ಠ 15 ವರ್ಷ ಬಾಳಿಕೆ ಬರಬೇಕಾದ ರಸ್ತೆಯಲ್ಲಿ ಎರಡೇ ತಿಂಗಳಲ್ಲಿ ಗುಂಡಿ ಬಿದ್ದಿವೆ.

ಇನ್ನು 1-2 ವರ್ಷದಲ್ಲಿ ಸಂಪೂರ್ಣ ನಾಶವಾಗಿ ನಮ್ಮ ಬದುಕು ದುಸ್ತರವಾಗಲಿದೆ. ಕಳಪೆ ಕಾಮಗಾರಿಯಿಂದಾಗಿ ಕೋಟ್ಯಾಂತರ ಮೌಲ್ಯದ ರಾಷ್ಟ್ರೀಯ ಸಂಪತ್ತುಗಳಾದ ಮರಳು, ಜೆಲ್ಲಿ, ಟಾರು ನಷ್ಟವಾಗಿದೆ.ಪರೋಕ್ಷವಾಗಿ ನಾಡಿನ ಪರಿಸರಕ್ಕೆ ಭಾರೀ ಹೊಡೆತ ಬಿದ್ದಿದೆ.
ಜನರ ಕೋಟ್ಯಾಂತರ ರೂಪಾಯಿಯ ತೆರಿಗೆ ಹಣ ನಷ್ಟವಾಗಿದೆ.

ಈ ಕಾರಣದಿಂದಾಗಿ ಮಾನ್ಯ ಜಿಲ್ಲಾಧಿಕಾರಿಗಳು,, ಶಾಸಕರು, ಸಂಸದರು, ಕಳಪೆ ಕಾಮಗಾರಿಗೆ ಕಾರಣರಾದ ಅಧಿಕಾರಿಗಳು, ಗುತ್ತಿಗೆದಾರರನ್ನು ಶಿಕ್ಷಿಸಬೇಕು. ಇಲ್ಲವೇ, ಕಾಮಗಾರಿಯ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳಬೇಕೆಂದು ಆಗ್ರಹಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...