Thursday, March 19, 2026
Thursday, March 19, 2026

ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕ ಹಿನ್ನೆಲೆ ಪ್ರತಿಭಟನೆ

Date:

ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ
ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಳಪೆ ಅವೈಜ್ಞಾನಿಕ ಕಾಮಗಾರಿಯ ಖಂಡಿಸಿ 5ನೇ ಸರಣಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದ ಪೊಲೀಸ್ ಚೌಕಿಯಲ್ಲಿ ಕಾಮಗಾರಿ ನಡೆದ ಎರಡೇ ತಿಂಗಳಲ್ಲಿ 100 ಅಡಿ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿವೆ.

ಅಸಂಬದ್ಧ ಡ್ರೈನ್ ಸ್ಲಾಬ್‌ಗಳ ಜೋಡಣೆ ಮಾಡಲಾಗಿದೆ. * ಹತ್ತಾರು ಕಡೆ ಗುಂಡಿ ಬಿದ್ದ ಪುಟ್‌ ಪಾತ್‌ಗಳು ಕಂಡುಬರುತ್ತಿದೆ.
ಅವೈಜ್ಞಾನಿಕ ಗ್ರಿಟ್ ಚೇಂಬರ್ ಅಳವಡಿಕೆಯಿಂದ ಚರಂಡಿಗೆ ನೀರು ಹರಿಯುತ್ತಿಲ್ಲ * ಕನಿಷ್ಠ 15 ವರ್ಷ ಬಾಳಿಕೆ ಬರಬೇಕಾದ ರಸ್ತೆಯಲ್ಲಿ ಎರಡೇ ತಿಂಗಳಲ್ಲಿ ಗುಂಡಿ ಬಿದ್ದಿವೆ.

ಇನ್ನು 1-2 ವರ್ಷದಲ್ಲಿ ಸಂಪೂರ್ಣ ನಾಶವಾಗಿ ನಮ್ಮ ಬದುಕು ದುಸ್ತರವಾಗಲಿದೆ. ಕಳಪೆ ಕಾಮಗಾರಿಯಿಂದಾಗಿ ಕೋಟ್ಯಾಂತರ ಮೌಲ್ಯದ ರಾಷ್ಟ್ರೀಯ ಸಂಪತ್ತುಗಳಾದ ಮರಳು, ಜೆಲ್ಲಿ, ಟಾರು ನಷ್ಟವಾಗಿದೆ.ಪರೋಕ್ಷವಾಗಿ ನಾಡಿನ ಪರಿಸರಕ್ಕೆ ಭಾರೀ ಹೊಡೆತ ಬಿದ್ದಿದೆ.
ಜನರ ಕೋಟ್ಯಾಂತರ ರೂಪಾಯಿಯ ತೆರಿಗೆ ಹಣ ನಷ್ಟವಾಗಿದೆ.

ಈ ಕಾರಣದಿಂದಾಗಿ ಮಾನ್ಯ ಜಿಲ್ಲಾಧಿಕಾರಿಗಳು,, ಶಾಸಕರು, ಸಂಸದರು, ಕಳಪೆ ಕಾಮಗಾರಿಗೆ ಕಾರಣರಾದ ಅಧಿಕಾರಿಗಳು, ಗುತ್ತಿಗೆದಾರರನ್ನು ಶಿಕ್ಷಿಸಬೇಕು. ಇಲ್ಲವೇ, ಕಾಮಗಾರಿಯ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳಬೇಕೆಂದು ಆಗ್ರಹಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...