Monday, April 21, 2025
Monday, April 21, 2025

ಶಿವಮೊಗ್ಗದಿಂದ ಇಬ್ಬರು ರೌಡಿ ಶೀಟರ್ ಗಳ ಗಡಿಪಾರು

Date:

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಇಬ್ಬರು ರೌಡಿಶೀಟರ್ ಗಳನ್ನು ಒಂದು ತಿಂಗಳವರೆಗೆ ಗಡಿಪಾರು ಮಾಡಿ ಶಿವಮೊಗ್ಗ ಎಸಿ ಎಸ್.ಬಿ.ದೊಡ್ಡೇಗೌಡರ್ ಆದೇಶಿಸಿದ್ದಾರೆ.

ಆಶ್ರಯ ಬಡಾವಣೆಯ ಶಮಂತ ನಾಯ್ಕ (29)ಮತ್ತು ಸಂದೀಪ್ ಕುಮಾರ್(29) ಗಡಿಪಾರು ಆದವರು.
ಶಮಂತ್ ಮೇಲೆ 15 ಮತ್ತು ಸಂದೀಪ್ ಮೇಲೆ 10 ಪ್ರಕರಣಗಳಿದ್ದು ಇಬ್ಬರೂ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ರೌಡಿಶೀಟರ್​​ಗಳಾಗಿದ್ದಾರೆ.

ಇವರು ಗಣಪತಿ ಹಬ್ಬದ ಸಮಯದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಾರ್ವಜನಿಕ ಶಾಂತಿ ಹಾಗೂ ನೆಮ್ಮದಿಗೆ ಭಂಗ ಉಂಟು ಮಾಡವ ಸಾಧ್ಯತೆ ಇದೆ. ಇದರರಿಂದಾಗಿ ಇಬ್ಬರನ್ನು ಗಡಿಪಾರು ಮಾಡುವಂತೆ ಎಸ್ಪಿ ಬಿ.ಎಂ.ಲಕ್ಷ್ಮಿಪ್ರಸಾದ್ ಅವರು ಉಪ ವಿಭಾಗೀಯ ದಂಡಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳಿಗೆ ವರದಿ ನೀಡಿದ್ದರು.

ಅದರಂತೆ ಆಗಸ್ಟ್ 25ರಿಂದ ಸೆಪ್ಟೆಂಬರ್ 25ರವರೆಗೆ ಶಿವಮೊಗ್ಗ ಉಪ ವಿಭಾಗ ಸರಹದ್ದಿನಿಂದ ಇಬ್ಬರನ್ನು ಗಡಿಪಾರು ಮಾಡಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...