Monday, May 4, 2026
Monday, May 4, 2026

ರಷ್ಯ ದೇಶವು ವಿಶ್ವವನ್ನು ಪರಮಾಣು ದುರಂತದ ಅಂಚಿಗೆ ತಂದಿದೆ- ಝೆಲೆನ್ಸ್ಕಿ

Date:

ರಷ್ಯಾವನ್ನು ಈಗಲೇ ತಡೆದು ನಿಲ್ಲಿಸದಿದ್ದರೆ ಆ ದೇಶದ ಕೊಲೆಗಾರರು ಖಂಡಿತಾ ಇತರ ದೇಶಗಳತ್ತ ಕಣ್ಣು ಹಾಕುತ್ತಾರೆ. ಉಕ್ರೇನ್ ಮೇಲಿನ ಆಕ್ರಮಣದ ಸಂದರ್ಭ ನಡೆದಿರುವ ಅಪರಾಧ ಕೃತ್ಯಗಳಿಗೆ ರಷ್ಯಾವನ್ನು ಹೊಣೆಗಾರರನ್ನಾಗಿಸಲು ಅಂತರಾಷ್ಟ್ರೀಯ ಸಮುದಾಯ ಮತ್ತು ವಿಶ್ವಸಂಸ್ಥೆ ಕ್ರಮ ಕೈಗೊಳ್ಳಬೇಕು ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಅವರು ಆಗ್ರಹಿಸಿದ್ದಾರೆ.

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉಕ್ರೇನ್ ಭೂಪ್ರದೇಶದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸಲಾಗುತ್ತದೆ. ನಮ್ಮ ಸ್ವಾತಂತ್ರ್ಯವು ನಿಮ್ಮ ಭದ್ರತೆಯಾಗಿದೆ ಎಂದರು.

ಝಪೋರಿಝಿಯ ಅಣುವಿದ್ಯುತ್ ಸ್ಥಾವರವನ್ನು ಯುದ್ಧವಲಯನ್ನಾಗಿ ಪರಿವರ್ತಿಸುವ ಮೂಲಕ ರಶ್ಯವು ವಿಶ್ವವನ್ನು ಪರಮಾಣು ದುರಂತದ ಅಂಚಿಗೆ ತಂದು ನಿಲ್ಲಿಸಿದೆ.

ಚೆರ್ನೋಬಿಲ್ನಲ್ಲಿ ಒಂದು ರಿಯಾಕ್ಟರ್ ಸ್ಫೋಟಿಸಿದಾಗ ಆಗಿದ್ದ ವಿಪತ್ತನ್ನು ಅಂತರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ ಮರೆಯಬಾರದು. ಝಪೋರಿಝಿಯದಲ್ಲಿ 6 ರಿಯಾಕ್ಟರ್ಗಳಿವೆ. ಆದ್ದರಿಂದ ಐಎಇಎ ತಕ್ಷಣ ಇದನ್ನು ತನ್ನ ನಿಯಂತ್ರಣಕ್ಕೆ ಪಡೆಯಬೇಕು. ರಶ್ಯವು ಇಲ್ಲಿ ಪರಮಾಣು ಬ್ಲಾಕ್ಮೇಲ್ ನಡೆಸುವುದನ್ನು ಬಿಟ್ಟು ಕೂಡಲೇ ಹಿಂದೆ ಸರಿಯಬೇಕು ಎಂದು ಝೆಲೆನ್ಸ್ಕಿ ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...